Categories: Shivamogga

ಅಪ್ರಾಪ್ತೆಯ ಅಶ್ಲೀಲ ಫೊಟೋಗಳನ್ನು ತೆಗೆದು ಆಕೆಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಕಠಿಣ ಶಿಕ್ಷೆ

ಶಿವಮೊಗ್ಗ: ಕಳೆದ 2019 ನೇ ಸಾಲಿನಲ್ಲಿ ಶಿವಮೊಗ್ಗ ನಗರದ 24 ವರ್ಷದ ಯುವಕನೊಬ್ಬನು, ತನ್ನ ಮೊಬೈಲ್ ನಲ್ಲಿ 14 ವರ್ಷದ ಅಪ್ರಾಪ್ತೆಯ ಅಶ್ಲೀಲ ಫೊಟೋಗಳನ್ನು ತೆಗೆದು, ಆಕೆಗೆ ಲೈಂಗಿಕ ಕಿರುಕುಳ ನೀಡಿರುತ್ತಾನೆಂದು ನೊಂದ ಬಾಲಕಿಯು ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಆರೋಪಿಗೆ ನ್ಯಾಯಾಲಯ ಶಿಕ್ಷೆ ನೀಡಿದೆ.

ಅಂದು ದಾಖಲಿಸಿಕೊಳ್ಳಲಾಗಿದ್ದ ಈ ಪ್ರಕರಣದ ಕುರಿತಂತೆ ವಿಚಾರಣೆ ನಡೆದಿತ್ತು. ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಅಭಯ್ ಪ್ರಕಾಶ್ ಸೋಮನಾಳ್,ಪಿಐ, ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆರವರು ತನಿಖೆ ಕೈಗೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ. ಪ್ರಕರಣದಲ್ಲಿ ಸರೋಜ, ಮಹೆಚ್.ಸಿ ಹಾಲಿ ಜಯನಗರ ಪೊಲೀಸ್ ಠಾಣೆರವರು ತನಿಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದರು.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, The Addl District and Sessions Court, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರು ದಿನಾಂಕ: 02-05-2023 ರಂದು ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗೆ 01 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 3,01,000 ರೂ ದಂಡ ವಿಧಿಸಿ ಆದೇಶ ನೀಡಿರುತ್ತಾರೆ.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

12 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

15 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

15 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

20 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

22 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago