ಅಮೃತ ಸಂಚಲನ ಯುವ ವೇದಿಕೆಯಿಂದ ನ.03 ರಂದು ಗರ್ತಿಕೆರೆಯಲ್ಲಿ ‘ಮಾತೃನುಡಿ’ ಅದ್ದೂರಿ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆ : ಸಂಚಲನ ಸಮುದಾಯ ಅಭಿವೃದ್ಧಿ ಟ್ರಸ್ಟ್ (ರಿ) ಅಮೃತ ಗರ್ತಿಕೆರೆ, ಅಮೃತ ಸಂಚಲನ ಯುವ ವೇದಿಕೆ ಅರ್ಪಿಸುವ ‘ಮಾತೃನುಡಿ’ 11ನೇ ವರ್ಷದ ‘ಕರುನಾಡ ಹಬ್ಬ’ ನ.03 ರಂದು ಗರ್ತಿಕೆರೆಯಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಕಾರ್ಯಕ್ರಮಗಳು :
ಗರ್ತಿಕೆರೆಯ ಬಿ.ಎಸ್ ಪುರುಷೋತ್ತಮ್ ರಾವ್ ವೃತ್ತದಲ್ಲಿ ಬೆಳಗ್ಗೆ 9:30 ಕ್ಕೆ ನಿಟ್ಟೂರು ಮಠದ ರೇಣುಕಾನಂದ ಮಹಾಸ್ವಾಮೀಜಿಯವರಿಂದ ಕನ್ನಡ ಧ್ವಜಾರೋಹಣ ನೆರವೇರಲಿದೆ. 10:30 ಕ್ಕೆ ಗರ್ತಿಕೆರೆ ಹಾಗೂ ಸುತ್ತಮುತ್ತಲಿನ ಸಹೃದಯಿ ಗ್ರಾಮಸ್ಥರ ಸಮ್ಮುಖದಲ್ಲಿ ಕನ್ನಡ ತಾಯಿ ಭುವನೇಶ್ವರಿ ಅದ್ದೂರಿ ಮೆರವಣಿಗೆ ನಡೆಯಲಿದೆ.

ನಂತರ ಸಂಜೆ 6:30 ಕ್ಕೆ ಅಮೃತ ಗ್ರಾಪಂ ಅಧ್ಯಕ್ಷ ವಿಶ್ವನಾಥ್ ಗಂದ್ರಳ್ಳಿ ಅಧ್ಯಕ್ಷತೆಯಲ್ಲಿ ‘ನಾವು ನಮ್ಮವರು’ 2023ನೇ ಸಾಲಿನ ಹೊಸನಗರ ತಾಲ್ಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪುಟ್ಟಸ್ವಾಮಿ ಕೆ.ಕೆ. ಸಹ ಶಿಕ್ಷಕರು ಕರ್ನಾಟಕ ಪಬ್ಲಿಕ್ ಶಾಲೆ ಅಮೃತ ಇವರಿಗೆ ಸನ್ಮಾನ. ನಂತರ ‘ಅಮೃತ ಶಿಕ್ಷಕರ ಕುಟುಂಬ’ ರುದ್ರಪ್ಪ, ಹೆಚ್. ಸಹಶಿಕ್ಷಕರು ಕರ್ನಾಟಕ ಪಬ್ಲಿಕ್ ಸ್ಕೂಲ್ ಶೆಟ್ಟಿಹಳ್ಳಿ, ಶಿವಮೊಗ್ಗ ತಾಲೂಕು, ಲಕ್ಷ್ಮಿ ಹೆಚ್, ಸಹಶಿಕ್ಷಕರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಶೆಟ್ಟಿಹಳ್ಳಿ, ರಶ್ಮಿ. ಕೆ.ಬಿ. ಸಹಶಿಕ್ಷಕರು. ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಸೂಳೇಬೈಲು, ಶಿವಮೊಗ್ಗ ತಾಲೂಕು ಇವರಿಗೆ ‘ಗುರುನಮನ’ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸಂಜೆ 07 ಗಂಟೆಗೆ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಕಾಲೇಜು ವಿಭಾಗದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ರಾತ್ರಿ 07:30 ಕ್ಕೆ ‘ಕನ್ನಡ ಜ್ಯೋತಿ ಕರುನಾಡಿಗೆ ಬೆಳಕಿನ ಮೌನ ನಮನ’ ನಂತರ 08 ಗಂಟೆಯಿಂದ ಝೀ ಕನ್ನಡ ಸರಿಗಮಪ ಖ್ಯಾತಿಯ ಸ್ಪೆಷಲ್ ಎಂಟ‌ರ್ಟೈನರ್ ಸಾಗರದ ದಿಯಾ ಹೆಗಡೆ ಮತ್ತು ದಿಶಾ ಹೆಗಡೆ ಹಾಗೂ ಸಾಗರ್ ಟ್ರ್ಯಾಕ್ಸ್ ಮೆಲೋಡೀಸ್ ಸಂಗಡಿಗರಿಂದ ‘ಸಂಗೀತ ಸಂಜೆ’ ಕಾರ್ಯಕ್ರಮ ನಡೆಯಲಿದೆ ಎಂದು ಸಂಚಲನಾ ಯುವ ವೇದಿಕೆಯ ಸದಸ್ಯರು ತಿಳಿಸಿದ್ದಾರೆ.

Malnad Times

Recent Posts

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು !

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು ! ಕಳಸ : ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ…

1 hour ago

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

10 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

10 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

11 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

11 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

13 hours ago