ಅರಸಾಳು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ ; ಸಂಸದರ ಕಾರ್ಯಕ್ಕೆ ಪ್ರಶಂಸೆ

ರಿಪ್ಪನ್‌ಪೇಟೆ: ಮಲೆನಾಡಿನ ಜನತೆ ಬಹು ವರ್ಷದ ಬೇಡಿಕೆಯನ್ನಾದರಿಸಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸ್ಪಂದಿಸುವ ಮೂಲಕ ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್‌ಸಿಟಿ ರೈಲು ನಿಲುಗಡೆ ಮಾಡಿರುವುದರಿಂದ ಪ್ರಯಾಣಿಕರ ಹೆಚ್ಚಳದೊಂದಿಗೆ ಸಂಸದರ ಸ್ಪಂದನೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇಂದು ಅರಸಾಳು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಬಳಿ ನಮ್ಮ ಪ್ರತಿನಿಧಿ ಮಾತನಾಡಿಸಿದಾಗ ಆವರು, ಮೈಸೂರು – ಬೆಂಗಳೂರು – ಶಿವಮೊಗ್ಗ – ಅನಂದಪುರ – ಸಾಗರ – ತಾಳಗುಪ್ಪ ಹೀಗೆ ತಾಳಗುಪ್ಪದಿಂದ ಸಾಗರ ಆನಂದಪುರ ಶಿವಮೊಗ್ಗ ಬೆಂಗಳೂರು ಮೈಸೂರು ಹೋಗುವ ಪ್ರಯಾಣಿಕರು ಪಡಬಾರದ ಕಷ್ಟ ಅನುಭವಿಸುವಂತಾಗಿತ್ತು. ಆದರೆ, ನಮ್ಮ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರರವರು ಪ್ರಯಾಣಿಕರ ಅಹವಾಲಿಗೆ ಸ್ಪಂದಿಸಿ ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣವನ್ನು ಅಭಿವೃದ್ದಿ ಪಡಿಸುವುದರೊಂದಿಗೆ ಮಲೆನಾಡಿನ ರೈತಾಪಿ ವರ್ಗದವರ ಮತ್ತು ನಿರುದ್ಯೋಗಿ ಯುವಕ, ಯುವತಿಯರಿಗೆ ಹಾಗೂ ಅನಾರೋಗ್ಯ ಪೀಡಿತರಿಗೆ ರಾಜಧಾನಿಗೆ ಕಡಿಮೆ ಖರ್ಚಿನಲ್ಲಿ ಹೋಗಿ ಬರಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ನಿಲುಗಡೆ ಮಾಡುವ ಕಾರ್ಯವನ್ನು ಪ್ರಶಂಸಿದರು.

ಅರಸಾಳು ರೈಲ್ವೆ ನಿಲ್ದಾಣದಿಂದ ಕೆಲವೇ ಅಂತರದಲ್ಲಿ ರಾಜ್ಯ ಹೆದ್ದಾರಿಯ ಸಂಪರ್ಕದ ಶಿವಮೊಗ್ಗ, ಬೈಂದೂರು, ಭಟ್ಕಳ, ಕುಂದಾಪುರ, ಉಡುಪಿ, ಮಾಸ್ತಿಕಟ್ಟೆ, ಚಕ್ರಾನಗರ, ಬಿದನೂರು ನಗರ, ಕೊಡಚಾದ್ರಿ ಕೊಲ್ಲೂರು,ಸಿಗಂದೂರು ಹೀಗೆ ಅತಿಶಯ ಮಹಾಕ್ಷೇತ್ರ ಹೊಂಬುಜ ಜೈನ ಮಠ, ಕೋಣಂದೂರು, ತೀರ್ಥಹಳ್ಳಿ, ಆರಗ, ಗರ್ತಿಕೆರೆ, ಹೆದ್ದಾರಿಪುರ ಮೂಗುಡ್ತಿ, ಕೋಡೂರು, ಹೊಸನಗರ ಸಂಪೆಕಟ್ಟೆ, ಕವಲೇದುರ್ಗಕೋಟೆ ಹೊಸಂಗಡಿ ಸಿದ್ದಾಪುರ, ಕಮಲಶಿಲೆ, ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನ ಹೀಗೆ ಇತಿಹಾಸ ಪ್ರಸಿದ್ದ ರಾಮಚಂದ್ರಪುರ ಮಠ, ರಿಪ್ಪನ್‌ಪೇಟೆ, ಬೆಳ್ಳೂರು, ಕೆಂಚನಾಲ, ಬಾಳೂರು, ಹರತಾಳು, ಚಿಕ್ಕಜೇನಿ, ಮಾರುತಿಪುರ, ಹುಂಚ, ಸೊನಲೆ ಗ್ರಾಮ ಪಂಚಾಯ್ತಿಗಳ ಮಜರೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹೃದಯ ಭಾಗವಾಗಿರುವ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಯಿಂದಾಗಿ ತುಂಬಾ ಅನುಕೂಲವಾಗಿದೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಶಾಸಕರಾದ ಬಿ.ಸ್ವಾಮಿರಾವ್, ಹರತಾಳು ಹಾಲಪ್ಪ, ಐಟಿಬಿಟಿ ಇಂಜಿನಿಯರ್ ಉದ್ಯೋಗಿ ರಮೇಶ ಹೈದರಾಬಾದ್, ಸೂರ್ಯಕಲಾ ಬೆಂಗಳೂರು, ನಿವೃತ್ತ ಆರ್.ಎಫ್.ಓ,ತಿಮ್ಮಪ್ಪ ಇನ್ನಿತರ ಹಲವು ಪ್ರಯಾಣಿಕರು ತಮ್ಮ ಹರ್ಷ ವ್ಯಕ್ತಪಡಿಸಿ ಸಂಸದರನ್ನು ಅಭಿನಂದಿಸುವುದರೊಂದಿಗೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸಹ ನಮಗೆ ತುಂಬ ಅನುಕೂಲವಾಗಿದೆ ಎಂದರು.

ಇದರೊಂದಿಗೆ ಮುಂಜಾನೆ ಹೋಗುವ ತಾಳಗುಪ್ಪ – ಬೆಂಗಳೂರು ಇಂಟರ್ ಸಿಟಿ ರೈಲು ಅರಸಾಳಿನಲ್ಲಿ ನಿಲುಗಡೆ ಮಾಡಿದರೆ ಇದರಿಂದ ಬೆಂಗಳೂರಿಗೆ ಹೋಗುವ ಪ್ರಯಾಣಿಕರಿಗೂ ಇನ್ನೂ ಹೆಚ್ಚಿನ ಪ್ರಯೋಜನವಾಗುವುದೆಂದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago