Categories: Shivamogga

ಅರ್ಹ ಮತದಾರರೆಲ್ಲ ಮತದಾನ ಮಾಡುವಂತೆ ಡಿಸಿ ಮನವಿ


ಶಿವಮೊಗ್ಗ: ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ವಿಕಲಚೇತನರು ತಮ್ಮ ತಮ್ಮ ಬೂತ್‍ಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪ್ರೇರೇಪಿಸಿದರು.


ಎಲ್ಲ ಅರ್ಹ ಮತದಾರರು ಮತದಾನದಲ್ಲಿ ಪಾಲ್ಗೊಳ್ಳುವ ಕುರಿತು ಜಾಗೃತಿ ಮೂಡಿಸಲು ಮಹಾನಗರಪಾಲಿಕೆಯಿಂದ ಪ್ರಮುಖ ರಸ್ತೆಗಳಲ್ಲಿ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ಮಿಳಘಟ್ಟದಲ್ಲಿ ವಿಕಲಚೇತನರು ನಿರ್ವಹಿಸುವ ಒಂದು ಮತಗಟ್ಟೆಯನ್ನು ಸ್ಥಾಪಿಸಲಾಗಿದೆ. 23 ಜನ ವಿಕಲಚೇತನರು ಇಲ್ಲಿ ನಿರ್ವಹಣೆ ಮಾಡುವರು ಎಂದು ತಿಳಿಸಿದ ಅವರು ಎಲ್ಲ ಅರ್ಹ ಮತದಾರರು ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.


ವಿಕಲಚೇತನರು ತಮ್ಮ ತ್ರಿಚಕ್ರ ವಾಹನಗಳಲ್ಲಿ ಇಂದು ಬೆಳಿಗ್ಗೆ ಮಹಾನಗರಪಾಲಿಕೆ ಆವರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ದೊಡ್ಮನಿ, ಸ್ವೀಪ್ ಅಧಿಕಾರಿ ನವೀದ್ ಹಾಗೂ ಸಹಸ್ರಾರು ಸಂಖ್ಯೆಯ ವಿಕಲಚೇತನರು ಭಾಗವಹಿಸಿದ್ದರು.

Malnad Times

Recent Posts

ರಂಭಾಪುರಿ ಶ್ರೀಗಳ ಮೇ ತಿಂಗಳ ಪ್ರವಾಸ ಕಾರ್ಯಕ್ರಮ ವಿವರ

ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ…

5 mins ago

Arecanut Today Price | ಏಪ್ರಿಲ್ 28ರ ಅಡಿಕೆ ರೇಟ್

ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 hours ago

ಮತದಾನ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ : ರಶ್ಮಿ

ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…

5 hours ago

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

5 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

12 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

22 hours ago