ಹೊಸನಗರ : ಅಶಕ್ತರ, ನೊಂದವರ, ದೀನದಲಿತರ, ಅನಾರೋಗ್ಯ ಪೀಡಿತರ ಬದುಕಿಗೆ ಆಸರೆಯಾಗುವಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ನೆರವಾಗಬೇಕೆಂದು ಸಂಘ ಸಂಸ್ಥೆಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಕರೆ ನೀಡಿದರು.
ಅವರು ಪಟ್ಟಣದ ಹಳೆ ಕೋರ್ಟ್ ಸರ್ಕಲ್ ನಲ್ಲಿ ಶ್ರೀ ಗಜಾನನ ಸೇವಾ ಸಮಿತಿಯವರು ಪ್ರತಿಷ್ಠಾಪಿಸಿದ 43ನೇ ವರ್ಷದ ಗಣಪತಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರಿಂದ ಅನಾವೃಷ್ಟಿ ಎದುರಿಸುತ್ತಿದ್ದು ಈ ಎಲ್ಲ ಸಂಕಷ್ಟಗಳ ನಡುವೆಯೂ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದು ಶ್ರೀ ಸಿದ್ಧಿವಿನಾಯಕ ಎಲ್ಲರ ಸಂಕಷ್ಟ ದೂರ ಮಾಡಿ ಸುಖಕರ ಜೀವನ ಉಂಟುಮಾಡಲೆಂದು ಹಾರೈಸಿದರು.
ಈ ಸಮಾರಂಭದಲ್ಲಿ ಯುವ ಮುಖಂಡರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಹಾಲಗದ್ದೆ ಉಮೇಶ್, ಕಟ್ಟೆ ಸುರೇಶ್, ಎ.ವಿ ಮಲ್ಲಿಕಾರ್ಜುನ, ಬಜಾಜ್ ಗುರುರಾಜ್, ಗುರುಕಿರಣ್ ಮೊದಲಾದವರು ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಗಜಾನನ ಸೇವಾ ಸಮಿತಿ ಅಧ್ಯಕ್ಷ ಹಾಡಿ ಗೋಪಾಲ ಸ್ವಾಗತಿಸಿದರು. ಪಿ ಮನೋಹರ್ ಕಾರ್ಯಕ್ರಮ ನಿರೂಪಿಸಿದರು. ಟಿ.ಆರ್ ಸುನಿಲ್ ವಂದಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…