Categories: ShivamoggaSoraba

ಆತಂಕ ತಂದ 4 ಮಂಗಗಳ ಸಾವು !

ಸೊರಬ : ಬರಗಾಲದ ಛಾಯೆಯ ಹಾನಿ ಪ್ರಾಣಿಗಳ ಮೇಲೆ ಬೀಳುತ್ತಿದ್ದು, ಚಂದ್ರಗುತ್ತಿ ಸೊರಬ ರಸ್ತೆಯ ಬಸದಿ ಬಳಿ ನಾಲ್ಕು ಮಂಗಗಳು ಅಸುನೀಗಿವೆ.

ಒಂದೆಡೆ ಪಕ್ಕದ ತಾಲ್ಲೂಕು ಶಿರಸಿಯಲ್ಲಿ ಮಂಗನ ಕಾಯಿಲೆಗೆ ತುತ್ತಾಗಿ ವ್ಯಕ್ತಿಯೋರ್ವ ಮರಣ ಹೊಂದಿರುವುದು ವರದಿಯಾಗಿದ್ದು, ಬೆನ್ನಲ್ಲೇ ಇಲ್ಲಿ ಮಂಗಗಳು ಸತ್ತಿರುವುದು ಕೂಡ ಜನತೆಯ ಆತಂಕವನ್ನು ಹೆಚ್ಚಿಸಿದೆ.

ಚಂದ್ರಗುತ್ತಿ ಭಾಗದಲ್ಲಿ ಈಚೆಗೆ ಅವ್ಯಾಹತ ಅರಣ್ಯ ನಾಶದ ಜೊತೆಗೆ ಬೆಂಕಿ ಹಚ್ಚಿ ಪಶುಪಕ್ಷಿಗಳಿಗೆ ಏನೂ ಆಹಾರ ಸಿಗದಂತಾಗಿದೆ. ಅವು ನೀರು ಆಹಾರ ಅರಿಸಿ ನಾಡಿಗೆ, ಹೊಲಗದ್ದೆಗಳ ಸಮೀಪಕ್ಕೆ ಬಂದು ಜನರ ಕ್ರೂರತ್ವಕ್ಕೆ ಬಲಿಯಾಗುತ್ತಿವೆ. ನದಿ, ಕೆರೆಗಳಿಗೆ ಪಂಪ್ ಹಚ್ಚುವ ಮೂಲಕ ನೀರು ಸಂಪೂರ್ಣ ಬರಿದಾಗಿದ್ದು ಮನುಷ್ಯನ ಉಪಯೋಗಕ್ಕೂ ನೀರು ಲಭಿಸದಂತಾಗಿದೆ.

ಈಚೆಗೆ ಗಿಳಿ, ಮಂಗ ಇತ್ಯಾದಿ ಕಾಟದಿಂದ ಬೆಳೆಗಳನ್ನು ರಕ್ಷಿಸಿಕೊಳ್ಳಲು ವಾಸನೆ ರಹಿತ ಔಷಧಿಗಳನ್ನು ಇರಿಸುತ್ತಿದ್ದು ಅಂತಹ ಔಷಧಿ ತಿಂದು ಸಹಾ ಮಂಗಗಳು ಸತ್ತಿರಬಹುದು ಎಂದು ಸಾರ್ವಜನಿಕವಾಗಿ ಕೇಳಿ ಬರುತ್ತಿದೆ.

ಹಸಿವಿನಿಂದ ಸತ್ತಿವೆಯೋ ?, ನೀರು ಸಿಗದೆ ಸತ್ತಿವೆಯೋ ?, ಅಥವಾ ಕಾಯಿಲೆಯಿಂದ ಸತ್ತಿವೆಯೋ ?, ಮುಂತಾದ ಚರ್ಚೆಯ ನಡುವೆ ಸಕಾಲಕ್ಕೆ ಗ್ರಾಮ ಪಂಚಾಯತಿ ಗಮನಕ್ಕೆ ಬಂದಿದ್ದು ಕೂಡಲೆ ಕ್ರಮಕ್ಕೆ ಮುಂದಾಗಿದೆ.

ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯವರು ಆಗಮಿಸಿ ಮಹಜರು ನಡೆಸಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಜನತೆಯ ದೂರಿನನ್ವಯ ಸ್ಥಳಕ್ಕೆ ಪಶು ವೈದ್ಯರನ್ನು ಅರಣ್ಯ ಸಿಬ್ಬಂದಿಯನ್ನು ಕರೆದುಕೊಂಡು ಹೋಗಿದ್ದು ಮಹಜರು ನಡೆಸಿ ಪರೀಕ್ಷೆಗೆ ಕಳಿಸಲಾಗಿದೆ. ಎಲ್ಲೆ ಮಂಗ ಸತ್ತಿದ್ದು ಕಾಣಿಸಿದರೆ ಕೂಡಲೇ ನಮ್ಮ ಗಮನಕ್ಕೆ ತರಬೇಕು.
– ನಾರಾಯಣಮೂರ್ತಿ, ಪಿಡಿಒ ಚಂದ್ರಗುತ್ತಿ ಗ್ರಾ.ಪಂ.

ಗ್ರಾಪಂ ಅಭಿವೃದ್ಧಿ ಅಧಿಕಾರಿ ನಾರಾಯಣ್ ಮೂರ್ತಿ, ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಎಂಪಿ ರತ್ನಾಕರ್, ಪಶು ಸಿಬ್ಬಂದಿ ಕಣ್ಣಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರದ ವೀಣಾ, ಹೇಮಾ, ಮುದಾಸಿರ್, ಆಶಾ ಕಾರ್ಯಕರ್ತೆರಾದ ಅಶ್ವಿನಿ, ಶರಾವತಿ, ಅರಣ್ಯ ಸಿಬ್ಬಂದಿ ಪ್ರಶಾಂತ್, ಗ್ರಾಮಸ್ಥರಾದ ಕೃಷ್ಣಪ್ಪ, ಪ್ರಶಾಂತ್ ನಾಯ್ಕ್ ಸೇರಿದಂತೆ ಗ್ರಾಮಸ್ಥರು ಮೃತಪಟ್ಟ ಮಂಗಗಳ ಅಂತ್ಯಕ್ರಿಯೆ ನೆರವೇರಿಸಿದರು.

Malnad Times

Recent Posts

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

8 mins ago

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

1 hour ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

11 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

13 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

14 hours ago

ಹೊಸನಗರ ಪಟ್ಟಣದ ಮತಗಟ್ಟೆ ಸಂಖ್ಯೆ 258 ರಲ್ಲಿ ಮತಯಂತ್ರ ದೋಷ, ಅರ್ಧ ಗಂಟೆ ಸ್ಥಗಿತಗೊಂಡ ಮತದಾನ

ಹೊಸನಗರ: ಪಟ್ಟಣದ ಹೈಸ್ಕೂಲ್‌ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…

15 hours ago