Categories: BhadravathiShivamogga

ಆಧ್ಯಾತ್ಮ ಚಿಂತನೆಯಿಂದ ಬಾಳಿಗೆ ನೆಮ್ಮದಿ ; ರಂಭಾಪುರಿ ಶ್ರೀಗಳು

ಭದ್ರಾವತಿ : ಭಾರತ ದೇಶ ಧರ್ಮ ಪ್ರಧಾನವಾದ ದೇಶ. ಇಲ್ಲಿರುವ ಸಂಸ್ಕೃತಿ ಪರಂಪರೆ ಆದರ್ಶಗಳು ಇನ್ನಿತರರಿಗೆ ಮಾದರಿಯಾಗಿವೆ. ಆಧ್ಯಾತ್ಮ ಚಿಂತನೆಯಿಂದ ಬಾಳಿನಲ್ಲಿ ನೆಮ್ಮದಿ ಶಾಂತಿ ಪ್ರಾಪ್ತವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಮಂಗಳವಾರ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಜರುಗಿದ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ವಿಜ್ಞಾನಕ್ಕೂ ಸಿಲುಕದೇ ಇರುವ ಅವ್ಯಕ್ತ ಶಕ್ತಿಯೇ ದೇವರು. ದೇವನೊಬ್ಬ ನಾಮ ಹಲವು. ಯಾವ ಹೆಸರಿನಿಂದ ಪ್ರಾರ್ಥಿಸಿ ಪೂಜಿಸಿದರೂ ಓಗೊಡುವ ಪರಮಾತ್ಮ ಒಬ್ಬನೇ ಎಂಬ ಸತ್ಯ ಅರಿತಾಗ ಸಮಾಜದಲ್ಲಿ ಜಾತಿ ಸಂಘರ್ಷಗಳು ನಡೆಯಲಾರವು. ದೇವರು ಮತ್ತು ಮರಣ ಯಾರೂ ಮರೆಯಬಾರದು. ನಾವು ಮಾಡಿದ ಉಪಕಾರ ಪರರು ಮಾಡಿದ ಅಪಕಾರ ಮರೆತರೆ ಬದುಕು ಶಕ್ತಿಯುತಗೊಳ್ಳಲು ಸಾಧ್ಯ. ಧರ್ಮ, ದೇವರು, ಜಾತಿ ಮತ್ತು ಪ್ರಾಂತೀಯ ಹೆಸರಿನಲ್ಲಿ ನಡೆಯುವ ಸಂಘರ್ಷಗಳು ಮಾನವನ ಶ್ರೇಯಸ್ಸಿಗೆ ಅಡ್ಡಿಯಾಗುತ್ತವೆ. ಧರ್ಮ ಮತ್ತು ವ್ಯಕ್ತಿ ಮಧ್ಯೆ ಗೋಡೆ ನಿರ್ಮಿಸದೇ ಸೇತುವೆ ನಿರ್ಮಿಸುವ ಕೆಲಸ ಎಲ್ಲೆಡೆ ಆಗಬೇಕಾಗಿದೆ. ವೀರಶೈವ ಧರ್ಮದಲ್ಲಿ ವಿಶ್ವಬಂಧುತ್ವದ ಆದರ್ಶ ಮೌಲ್ಯಗಳನ್ನು ಶ್ರೀ ಜಗದ್ಗುರು ರೇಣುಕಾಚಾರ್ಯರು ಮಹಾಮುನಿ ಅಗಸ್ತ್ಯರಿಗೆ ಬೋಧ ಮಾಡುವಾಗ ಸ್ಪಷ್ಟವಾಗಿ ಹೇಳಿದ್ದಾರೆ. ಸತ್ಯಂ ವಧ ಧರ್ಮಂ ಚರ ಎಂದಿದೆ ಶಾಸ್ತ್ರ. ಸತ್ಯವನ್ನು ಯಾವಾಗಲೂ ಮಾತನಾಡಬೇಕು. ಧರ್ಮದ ನಡೆಯಂತೆ ಜೀವನ ಇರಬೇಕಾಗುತ್ತದೆ. ಜ್ಞಾನ ಕ್ರಿಯಾತ್ಮಕವಾದ ವೀರಶೈವ ಧರ್ಮ ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿದಿದೆ ಎಂದರು.

ಮಳಲಿ ಮಠದ ಡಾ|| ನಾಗಭೂಷಣ ಶ್ರೀಗಳು, ಬಿಳಕಿ ರಾಚೋಟೇಶ್ವರ ಶ್ರೀಗಳು, ಹುಣಸಘಟ್ಟ ಗುರುಮೂರ್ತಿ ಶ್ರೀಗಳು, ಸಿದ್ಧರಬೆಟ್ಟದ ವೀರಭದ್ರ ಶ್ರೀಗಳು, ಚನ್ನಗಿರಿ ಕೇದಾರ ಶಿವಶಾಂತವೀರ ಶ್ರೀಗಳು, ಬೀರೂರು ಬಾಳೆಹೊನ್ನೂರು ಮಠದ ರುದ್ರಮುನಿ ಶ್ರೀಗಳು ಉಪಸ್ಥಿತರಿದ್ದರು.

ಅನ್ನದಾಸೋಹ ಸೇವೆ ಸಲ್ಲಿಸಿದ ಹೆಸರಾಂತ ಲೆಕ್ಕಪರಿಶೋಧಕ ಸದಾಶಿವಪ್ಪ ಮತ್ತು ಲಿಂ.ನಾಗರಾಜು ಧರ್ಮಪತ್ನಿ ಮಮತಾ ನಾಗರಾಜ ಮತ್ತು ಮಕ್ಕಳು ಉಭಯತರರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗೌರವ ಗುರುರಕ್ಷೆಯಿತ್ತು ಶುಭ ಹಾರೈಸಿದರು.

ಸಮಾರಂಭದ ನೇತೃತ್ವವನ್ನು ಎಡೆಯೂರು ರೇಣುಕ ಶಿವಾಚಾರ್ಯ ಸ್ವಾಮಿಗಳು ವಹಿಸಿ ಮಾತನಾಡಿದರು. ಹಲವಾರು ಸಂಘ ಸಂಸ್ಥೆ ಮತ್ತು ದಾನಿಗಳಿಗೆ ಶ್ರೀ ಜಗದ್ಗುರುಗಳಿಂದ ಗುರುರಕ್ಷೆ ನೆರವೇರಿತು. ತಾವರೆಕೆರೆ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕೂಡ್ಲಿಗೆರೆ ಗ್ರಾಮಸ್ಥರು ಶ್ರೀ ರಂಭಾಪುರಿ ಜಗದ್ಗುರುಗಳಿಗೆ ತಮ್ಮ ಗೌರವ ಸಮರ್ಪಿಸಿದರು.

ಸಮಾರಂಭಕ್ಕೂ ಮುನ್ನ ಶ್ರೀ ರಂಭಾಪುರಿ ಜಗದ್ಗುರುಗಳು ಜನಕಲ್ಯಾಣಕ್ಕಾಗಿ ಇಷ್ಟಲಿಂಗ ಮಹಾಪೂಜಾ ನೆರವೇರಿಸಿದರು. ಸಹಸ್ರಾರು ಭಕ್ತರಿಗೆ ಅನ್ನದಾಸೋಹ ನೆರವೇರಿತು.

Malnad Times

Recent Posts

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

9 mins ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

1 hour ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

3 hours ago

ಹೊಸನಗರ ಪಟ್ಟಣದ ಮತಗಟ್ಟೆ ಸಂಖ್ಯೆ 258 ರಲ್ಲಿ ಮತಯಂತ್ರ ದೋಷ, ಅರ್ಧ ಗಂಟೆ ಸ್ಥಗಿತಗೊಂಡ ಮತದಾನ

ಹೊಸನಗರ: ಪಟ್ಟಣದ ಹೈಸ್ಕೂಲ್‌ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…

3 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆ, ಎಲ್ಲೆಲ್ಲಿ ಎಷ್ಟೆಷ್ಟು ?

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆಯಾಗಿದೆ.…

4 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಈವರೆಗಿನ ಶೇಕಡಾವಾರು ಮತದಾನದ ವಿವರ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ…

5 hours ago