Categories: Shivamogga

ಆಯನೂರಿಗೆ ಮೋದಿ ಭೇಟಿ ಹಿನ್ನೆಲೆ ; ತಾತ್ಕಾಲಿಕ ಮಾರ್ಗ ಬದಲಾವಣೆ

ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಆಯನೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ಹಿತ ದೃಷ್ಟಿಯಿಂದ ದಿನಾಂಕ: 07-05-2023 ರಂದು ಈ ಕೆಳಕಂಡಂತೆ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.

ಸಾಗರದಿಂದ ಶಿವಮೊಗ್ಗ ಕಡೆಗೆ ಬರುವ ಲಘು ವಾಹನಗಳು:
ಆನಂದಪುರ ಎಡೆಹಳ್ಳಿ ಸರ್ಕಲ್ – ಚೊರಡಿ – ಕುಂಸಿ – ಕುಂಸಿ ರೈಲ್ವೆ ಗೇಟಿನ ಹತ್ತಿರ ಎಡಕ್ಕೆ ತಿರುಗಿ ಹಾರ್ನಳ್ಳಿ – ಬೈರನಕೊಪ್ಪ -ಹಿಟ್ಟೂರು ಕ್ರಾಸ್ ಬಲಕ್ಕೆ ತಿರುಗಿ ಶಿವಮೊಗ್ಗಕ್ಕೆ ಬಂದು ಸೇರುವುದು.

ಸಾಗರದಿಂದ ಶಿವಮೊಗ್ಗದ ಕಡೆಗೆ ಬರುವ ಭಾರಿ ಮತ್ತು ಸರಕು ವಾಹನಗಳು:
ಆನಂಪುರ – ಶಿಕಾರಿಪುರ – ಹೊನ್ನಾಳಿ ಮೂಲಕ ಶಿವಮೊಗ್ಗಕ್ಕೆ ಬಂದು ಸೇರುವುದು.

ಶಿವಮೊಗ್ಗದಿಂದ ಸಾಗರಕ್ಕೆ ಹೋಗುವ ಲಘು ವಾಹನಗಳು:
ಶಿವಮೊಗ್ಗದಿಂದ ಸೋಮಿನಕೊಪ್ಪ – ಗೆಜ್ಜೇನಹಳ್ಳಿ – ಮುದುವಾಲ – ಹಾರ್ನಳ್ಳಿ – ಕುಂಸಿ ರೈಲ್ವೆ ಗೇಟಿನ ಹತ್ತಿರ ಬಲಕ್ಕೆ ತಿರುಗಿ ಸಾಗರಕ್ಕೆ ಹೋಗುವುದು.

ಶಿವಮೊಗ್ಗದಿಂದ ಸಾಗರಕ್ಕೆ ಹೋಗುವ ಭಾರಿ ಮತ್ತು ಸರಕು ವಾಹನಗಳು:
ಶಿವಮೊಗ್ಗದಿಂದ ಹೊನ್ನಾಳಿ – ಶಿಕಾರಿಪುರ – ಆನಂದಪುರ ಮೂಲಕ ಸಾಗರಕ್ಕೆ ಹೋಗುವುದು

ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುವ ಭಾರಿ ಮತ್ತು ಲಘು ವಾಹನಗಳು:
ಶಿವಮೊಗ್ಗದಿಂದ ಹೊನ್ನಾಳಿ ಮೂಲಕ ಶಿಕಾರಿಪುರಕ್ಕೆ ಹೋಗುವುದು.

ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುವ ಭಾರಿ ಮತ್ತು ಲಘು ವಾಹನಗಳು:
ಶಿಕಾರಿಪುರ ದಿಂದ ಹೊನ್ನಾಳಿ ಮೂಲಕ ಶಿವಮೊಗ್ಗಕ್ಕೆ ಬಂದು ಸೇರುವುದು.

ಶಿವಮೊಗ್ಗದಿಂದ ರಿಪ್ಪನ್‌ಪೇಟೆ ಹಾಗೂ ಹೊಸನಗರ ಕಡೆಗೆ ಹೋಗುವ ಭಾರಿ ಮತ್ತು ಲಘು ವಾಹನಗಳು:
ಶಿವಮೊಗ್ಗದಿಂದ ಮಂಡಗದ್ದೆ – ಕೋಣಂದೂರು – ರಿಪ್ಪನ್‌ಪೇಟೆ ಮೂಲಕ ಹೊಸನಗರಕ್ಕೆ ಹೋಗುವುದು.

ರಿಪ್ಪನ್‌ಪೇಟೆ ಹೊಸನಗರದಿಂದ ಶಿವಮೊಗ್ಗಕ್ಕೆ ಬರುವ ಭಾರಿ ಮತ್ತು ಲಘು ವಾಹನಗಳು:
ಕೋಣಂದೂರು – ಸಿ. ಕೆ. ರಸ್ತೆ – ಮಂಡಗದ್ದೆ – ಮಾಳೂರು ಮೂಲಕ ಶಿವಮೊಗ್ಗಕ್ಕೆ ಬಂದು ಸೇರುವುದು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

10 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

13 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

14 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

18 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

20 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago