Categories: Shivamogga

ಆಯನೂರು ಗೆಲುವು ನಿಶ್ಚಿತ ; ಕೆ.ಬಿ ಪ್ರಸನ್ನ ಕುಮಾರ್

ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಸ್ಪರ್ಧಿಸಿದ್ದು, ಅವರು ಗೆಲ್ಲುವುದು ನಿಶ್ಚಿತ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದ್ದಾರೆ.


ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಷರತ್ತು ಇಲ್ಲದೇ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಜೆಡಿಎಸ್ ಪಕ್ಷಕ್ಕೆ ಸೇರಿದ್ದೇನೆ. ನಗರದ ಹಿತಾಸಕ್ತಿ ಕಾಪಾಡುವುದು ನನ್ನ ಧರ್ಮವಾಗಿದೆ. ನನ್ನ ಎಲ್ಲಾ ಅಭಿಮಾನಿಗಳು ಕೂಡ ಶಾಂತಿ ಬಯಸುವವರು. ಯಾರೂ ಬೆಂಕಿ ಹಚ್ಚುವವರಲ್ಲ, ಎಲ್ಲರೊಂದಿಗೆ ಚರ್ಚೆ ಮಾಡಿಯೇ ಜೆಡಿಎಸ್ ಪಕ್ಷಕ್ಕೆ ಸೇರಿದ್ದೇನೆ. ಬಹಳ ಜನ ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಬರಲಿದ್ದಾರೆ ಎಂದರು.

ಎಷ್ಟು ಮತದ ಅಂತರದಿಂದ ಗೆಲ್ಲಬಹುದು ಎಂಬ ಪ್ರಶ್ನೆಗೆ ಆಯನೂರು ಮಂಜುನಾಥ್ ಗೆಲ್ಲವುದು ನಿಶ್ಚಿತ. ಒಂದು ಮತವಾದರೂ ಗೆಲುವು ಗೆಲುವೇ. ಫಲಿತಾಂಶ ಬಂದ ಮೇಲೆ ಮತದ ಅಂತರ ಗೊತ್ತಾಗುತ್ತದೆ. ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಮನಸ್ಥಿತಿಯನ್ನು ಮತದಾರ ಅರಿತಿದ್ದಾನೆ. ನಗರದ ಅಭಿವೃದ್ಧಿಗೆ ಶಾಂತಿ ಕಾಪಾಡುವುದು ಅತಿ ಮುಖ್ಯ. ರೈಲು, ವಿಮಾನ ನಿಲ್ದಾಣ ಸೇರಿದಂತೆ ಅನೇಕ ಅಭಿವೃದ್ಧಿ ಆದರೂ ಸಹ ಯಾವುದೇ ಕೈಗಾರಿಕೋದ್ಯಮಿ ಶಿವಮೊಗ್ಗ ಜಿಲ್ಲೆಗೆ ಬರುವುದಿಲ್ಲ ಏಕೆ ಎಂದು ಬಿಜೆಪಿಯವರೇ ಹೇಳಬೇಕು. ಶಿವಮೊಗ್ಗದ ಜನ ಶಾಂತಿಪ್ರಿಯರು. ಹಾಗಾಗಿ ಜೆಡಿಎಸ್ ಅಭ್ಯರ್ಥಿಗೆ ಈ ಬಾರಿ ಮತ ಹಾಕಲಿದ್ದಾರೆ.


ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಮಾತನಾಡಿ, ಗೆಲ್ಲುವ ದಾರಿ ಹಗುರವಾಗಿದೆ. ನನ್ನ ಗೆಲುವಿನ ಹಾದಿಗೆ ಕೆ.ಬಿ. ಪ್ರಸನ್ನಕುಮಾರ್, ಎಂ. ಶ್ರೀಕಾಂತ್ ಅವರ ತಂಡ ಸುಲಭದ ದಾರಿ ಮಾಡಿಕೊಟ್ಟಿದೆ. ಕುರುಕ್ಷೇತ್ರ ಯುದ್ಧ ಸಮರ್ಥವಾಗಿ ಎದುರಿಸುತ್ತೇವೆ. ಹೇಳುವುದಕ್ಕಿಂತ ಮಾಡುವುದು ಲೇಸು ಎಂಬಂತೆ ಕೆಲಸ ಮಾಡುತ್ತೇವೆ. ನಾಳೆಯಿಂದ ಜೆಡಿಎಸ್ ಗೆ ಬರುವವರ ಸಂಖ್ಯೆ ಹೆಚ್ಚಾಗುತ್ತಾ ಹೋಗುತ್ತದೆ ಎಂದರು.

ಚುನಾವಣಾ ಪ್ರಚಾರಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬರುತ್ತಾರೆ. ಆರೋಗ್ಯ ನೋಡಿಕೊಂಡು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬರುವವರಿದ್ದಾರೆ. ಪ್ರಚಾರದ ಕಾವು ಏರುತ್ತಿದೆ. ನನ್ನನ್ನೂ ಸೇರಿಕೊಂಡಂತೆ ನನ್ನ ಜೊತೆಗಿರುವವರು ಚುನಾವಣೆಯ ನಾಡಿ ಮಿಡಿತ ಬಲ್ಲವರಾಗಿದ್ದಾರೆ. ಆದ್ದರಿಂದ ಯಾರ ಭಯವೂ ನಮಗಿಲ್ಲ. ನಾವು ಗೆದ್ದೇ ಗೆಲ್ಲುತ್ತೇವೆ. ಶಿವಮೊಗ್ಗಕ್ಕೆ ಶಾಂತಿ ತರುತ್ತೇವೆ ಎಂದರು.


ಜೆಡಿಎಸ್ ಜಿಧ್ಯಕ್ಷ ಎಂ. ಶ್ರೀಕಾಂತ್, ಪ್ರಮುಖರಾದ ನಿಖಿಲ್, ನಾಗರಾಜ ಕಂಕಾರಿ, ಪಾಲಾಕ್ಷಿ, ಸತ್ಯನಾರಾಯಣ್, ರಾಮಕೃಷ್ಣ, ಬೊಮ್ಮನಕಟ್ಟೆ ಮಂಜುನಾಥ್, ಕಡಿದಾಳ್ ಗೋಪಾಲ್, ಸಿದ್ದಪ್ಪ, ರಘು, ಸಂಗಯ್ಯ, ಭಾಸ್ಕರ್ ಇದ್ದರು

Malnad Times

Recent Posts

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

48 mins ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

4 hours ago

ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ತಕ್ಷಣ ₹ 15 ಲಕ್ಷ ಪರಿಹಾರ ನೀಡಿ ; ಹರತಾಳು ಹಾಲಪ್ಪ ಆಗ್ರಹ

ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…

6 hours ago

ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ರೋಡ್ ಷೋ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ ; ಪ್ರದೀಪ್ ಈಶ್ವರ್

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…

6 hours ago

ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ ; ಮಧು ಬಂಗಾರಪ್ಪ

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…

9 hours ago

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

21 hours ago