ಇದು 2024ರ ಲೋಕಸಭಾ ಚುನಾವಣೆ ಮುನ್ಸೂಚನೆ ; ಶಾಸಕ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಇಂದು ಬಿಜೆಪಿ ಕಾರ್ಯಕರ್ತರ ಪಾಲಿಗೆ ಸಂಭ್ರಮದ ದಿನ. ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ (Election Results) ಮೂರು ರಾಜ್ಯಗಳಲ್ಲಿ ಬಿಜೆಪಿ (BJP) ಅತ್ಯುತ್ತಮ ಲೀಡ್ ನಲ್ಲಿ ಇದೆ. ಇಂಡಿಯನ್ ಅಲೆಯನ್ಸ್ ನೆಲ ಕಚ್ಚುತ್ತಿದೆ. ಗ್ಯಾರಂಟಿ ನೀಡಿದರು ಜನ ಒಪ್ಪದೇ ಕಾಂಗ್ರೆಸ್‌ಗೆ (Congress) ತಪರಾಕಿ ಹೊಡೆದಿದ್ದಾರೆ ಎಂದು ಮಾಜಿ ಗೃಹಸಚಿವ, ಶಾಸಕ ಆರಗ ಜ್ಞಾನೇಂದ್ರ (Araga Jnanendra) ಹೇಳಿದರು.

ಭಾನುವಾರ ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮೂರು ರಾಜ್ಯ ಬಿಜೆಪಿ ಪರವಾಗಿ ಬಂದಿದ್ದ ಕಾರಣ ತೀರ್ಥಹಳ್ಳಿಯಲ್ಲಿ ಕಾರ್ಯಕರ್ತರ ಜೊತೆ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ತೆಲಂಗಾಣದಲ್ಲಿ ಕರ್ನಾಟಕದ ಹಣವನ್ನು ತೆಗೆದುಕೊಂಡು ಹೋಗಿ ಸುರಿದು ಇಲ್ಲಿನ ನಾಯಕರು ಅಲ್ಲಿ ಪ್ರಚಾರ ಮಾಡಿ ಮಾಡಬಾರದ ಅನೈತಿಕ ಕೆಲಸವನ್ನು ಈ ಚುನಾವಣೆಯಲ್ಲಿ ಮಾಡಿದ್ದರಿಂದ ಸ್ವಲ್ಪ ಕಾಂಗ್ರೆಸ್ ಮುನ್ನಡೆ ಪಡೆದಿದೆ. ಇಲ್ಲದಿದ್ದರೆ ಬಿ.ಆರ್.ಎಸ್ ಗೆಲ್ಲುವ ಪರಿಸ್ಥಿತಿ ಇತ್ತು ಎಂದರು.

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://bit.ly/3RmDQsF

ಛತ್ತೀಸ್ಗಢದಲ್ಲಿ ಅತಂತ್ರ ಎನ್ನುವ ಸಮೀಕ್ಷೆ ಬಂದಿತ್ತು. ಆದರೆ ಊಹೆಗೂ ನಿಲುಕದ ಮತದಾರನ ತೀರ್ಪು ಹೊರ ಬೀಳುತ್ತಿದೆ.ಅದು ಬಿಜೆಪಿ ಪರವಾಗಿ ಬೀಳುತ್ತಿದೆ. ದೇಶ ಮೊದಲು ಎನ್ನುವ ತತ್ವದ ಪರವಾಗಿ ಬೀಳುತ್ತಿರುವುದು ನಾವೆಲ್ಲ ಹೆಮ್ಮೆ ಪಡುವ ವಿಷಯ. ಇಡೀ ದೇಶದಲ್ಲಿ ಅತೀ ದೊಡ್ಡ ರಾಜ್ಯಗಳಾದ ರಾಜಸ್ಥಾನ ಹಾಗೂ ಮಧ್ಯಪ್ರದೇಶ ದಲ್ಲಿ ಅಭೂತ ಪೂರ್ವ ಬೆಂಬಲ ಗಳಿಸಿದೆ. ತೆಲಂಗಾಣದಲ್ಲೂ ನಮ್ಮ ಮತ ಇಮ್ಮಡಿಯಾಗಿದೆ, ಅಷ್ಟೇ ಅಲ್ಲದೆ ಇದು 2024ರ ಲೋಕಸಭಾ ಚುನಾವಣೆಯ ಮುನ್ಸೂಚನೆ ಎಂದರು.

ಈ ಚುನಾವಣೆಯನ್ನು ಸೆಮಿಫೈನಲ್ ಎಂದು ಹೇಳಲಾಗುತ್ತಿತ್ತು. ಇದರಲ್ಲಿ ಗೆದ್ದಿದ್ದೇವೆ, ಖಂಡಿತವಾಗಿ ಫೈನಲ್ ಮೋದಿಯದ್ದೆ, ಮೋದಿ ಫೈನಲ್‌ನಲ್ಲಿ ಗೆಲುವು ಪಡೆಯುತ್ತಾರೆ ಎನ್ನುವ ಸಂದೇಶ ಹಾಗೂ ವಿಶ್ವಾಸ ಈ ಐದು ರಾಜ್ಯಗಳ ಜನ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿಯಿಂದ ಕೂಡ ಮುಂದಿನ ಲೋಕಸಭೆಯಲ್ಲಿ ಗೆಲ್ಲಿಸೋಣ, ಮೋದಿಯವರ ಕೈ ಬಲಪಡಿಸೋಣ. ಶತಮಾನಗಳ ಕಾಲ ಆಡಳಿತ ನೆಡೆಸಿದ್ದ ಕಾಂಗ್ರೆಸ್ ಇಂದು ಸಾಧನೆ ಹೇಳಿಕೊಳ್ಳಲು ನಾಚಿಕೆಪಟ್ಟು ಗೆಲ್ಲಲು ಗ್ಯಾರಂಟಿ ಮೊರೆ ಹೋಗುತ್ತಿದೆ, ಇದಕ್ಕೆ ಜನ ತಕ್ಕ ಉತ್ತರ ನೀಡಿದ್ದಾರೆ ಎಂದರು.

Malnad Times

Recent Posts

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

5 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

12 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

12 hours ago