ಶಿವಮೊಗ್ಗ: ಇಲ್ಲಿ ಗಲಾಟೆ ಮಾಡಬೇಡಿ, ಹೋಗ್ರೋ ಎಂದಿದ್ದಕ್ಕೆ ತಿಮ್ಮಪ್ಪ ಎಂಬುವವರಿಗೆ ಅನ್ಯಕೋಮಿನ ಯುವಕರು ಹಿಗ್ಗಾಮುಗ್ಗಾ ಥಳಿಸಿ ದೊಣ್ಣೆಯಿಂದ ತಲೆ ಹಿಂಭಾಗ ಹಲ್ಲೆ ನಡೆಸಿದ್ದಾರೆ.
ಸುಮಾರು 15 ಜನ ಯುವಕರ ತಂಡ ತಿಮ್ಮಪ್ಪ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಗೋಪಾಳ ಬಡಾವಣೆಯ ಕೊರಮರಕೇರಿ ಮಾರಿಯಮ್ಮ ದೇಗುಲ ಬಳಿ ಘಟನೆ ನಡೆದಿದೆ.
ಯುವಕರ ತಂಡವೊಂದು ಯಾರನ್ನೋ ಹುಡುಕಿಕೊಂಡು ಕೂಗಾಡಿಕೊಂಡು ಬಂದಿತ್ತು. ಈ ವೇಳೆ ತಿಮ್ಮಪ್ಪ ಅವರು ಯುವಕರಿಗೆ ಬೈದು ಬುದ್ಧಿ ಹೇಳಿದ್ದಾರೆ. ಆಗ ಆಕ್ರೋಶಗೊಂಡ ಯುವಕರು ತಿಮ್ಮಪ್ಪ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಜಗಳ ಬಿಡಿಸಲು ಬಂದ ತಿಮ್ಮಪ್ಪರ ಪುತ್ರ ದರ್ಶನ್ (19) ಹಾಗೂ ಮನು ಎಂಬ ಯುವಕರ ಮೇಲೆ ಕೂಡ ಹಲ್ಲೆ ನಡೆದಿದೆ.
ಡ್ರ್ಯಾಗರ್ನಿಂದ ದರ್ಶನ್ ತೋಳಿನ ಭಾಗಕ್ಕೆ ದಾಳಿ ಮಾಡಲಾಗಿದ್ದು ಮತ್ತೊಬ್ಬ ಯುವಕ ಮನು ಎಂಬಾತನ ಮೇಲೂ ಭೀಕರ ಹಲ್ಲೆ ನಡೆದಿದೆ. ಬಳಿಕ ಮೂವರನ್ನೂ ಥಳಿಸಿ ಯುವಕರ ತಂಡ ಪರಾರಿಯಾಗಿದೆ.
ಸ್ಥಳಕ್ಕೆ ತುಂಗಾನಗರ ಪೊಲೀಸರು ದೌಡಾಯಿಸಿ ದೂರು ದಾಖಲಿಸಿದ್ದಾರೆ. ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಹಲ್ಲೆ ಮಾಡಿದ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…