ಹೊಸನಗರ : ಇಸ್ಪೀಟ್ ಅಡ್ಡೆ ಮೇಲೆ ಹೊಸನಗರ ಪೊಲೀಸರು ದಾಳಿ ನಡೆಸಿ 9 ಆರೋಪಿಗಳನ್ನು ಬಂಧಿಸಿ 80 ಸಾವಿರ ರೂ. ನಗದು ವಶ ಪಡೆದ ಘಟನೆ ತಾಲೂಕಿನ ಹೆಬೈಲು ದೇವಸ್ಥಾನ ಬಳಿ ನಡೆದಿದೆ.
ಹೆಬೈಲು ಸೋಮೇಶ್ವರ ದೇವಸ್ಥಾನದ ಬಳಿ ಅರಣ್ಯ ಪ್ರದೇಶದಲ್ಲಿ ಹಣವನ್ನು ಪಣಕಿಟ್ಟು ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಕಾನೂನು ಬಾಹಿರವಾಗಿ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಹೊಸನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ವೈ.ಕೆ. ಮತ್ತವರ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.
ಆನಂದಪುರ ಹಾಗೂ ಸಾಗರ ವಾಸಿಗಳಾದ ಸುರೇಶ ಬಿನ್ ಶ್ರೀಧರ, ಹಾಲಪ್ಪ ಬಿನ್ ಕೃಷ್ಣಪ್ಪ, ಸುಪ್ರಿತ್ ಬಿನ್ ಕೆಂಚಪ್ಪ, ಭಾಸ್ಕರ ಬಿನ್ ಮೋಹನ್, ರಫೀಕ್ ಬಿನ್ ಇಬ್ರಾಹಿಂ, ಕಾರ್ತಿಕ ಬಿನ್ ಪರಶುರಾಮ, ಪುರಪ್ಪೆಮನೆಯ ಉಪೇಂದ್ರ ಬಿನ್ ಸಂಜೀವ, ಉದಯ ಬಿನ್ ಸಂತೋಷ್, ಟಿಲ್ಲರ್ ಮಂಜು ರವರುಗಳನ್ನು ಬಂಧಿಸಿ ಜೂಜಾಟಕ್ಕೆ ತೊಡಗಿಸಿಕೊಂಡಿದ್ದ 80,500 ರೂ.ಗಳನ್ನು, 52 ಇಸ್ಪೀಟ್ ಕಾರ್ಡ್, ಚಾರ್ಜರ್ ಲೈಟ್ ಮತ್ತು ಟಾರ್ಪಲ್ ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಎಸ್ಪಿ ಮಿಥುನ್ ಕುಮಾರ್ ಜಿ.ಕೆ, ಎಎಸ್ಪಿ ಅನಿಲ್ ಕುಮಾರ್ ಎನ್ ಬೂಮರೆಡ್ಡಿ, ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ಎಂ ಸುತಾರ, ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಶಿವಾನಂದ ವೈ ಕೆ ರವರು ಸಿಬ್ಬಂದಿಗಳಾದ ಈರೇಶ್, ಗಂಗಪ್ಪ ಬಟ್ಟೋಲಿ, ಸುನಿಲ್ ತೀರ್ಥೇಶ್, ಶಶಿಧರ, ಸಂತೋಷ್ ನಾಯಕ್, ಗೋಪಾಲಕೃಷ್ಣ, ಅವಿನಾಶ್, ಮಹೇಶ, ಸಂದೀಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…