Categories: Shivamogga

ಎಂಸಿಎ ಫೆಸ್ಟ್ ನಲ್ಲಿ ಸ್ಟಾಂಡ್ ಅಪ್ ಕಾಮಿಡಿಯನ್ ರಾಘವೇಂದ್ರ ಆಚಾರ್ಯ | ಯುವಕರು ಸಂಭ್ರಮಿಸುವ ಗುಣ ಬೆಳೆಸಿಕೊಳ್ಳಿ

ಶಿವಮೊಗ್ಗ : ಬದುಕಿನಲ್ಲಿ ಎದುರಾಗುವ ಎಲ್ಲಾ ಸನ್ನಿವೇಶಗಳನ್ನು ಸಂಭ್ರಮಿಸುವ ಗುಣ ಯುವ ಸಮೂಹ ಬೆಳೆಸಿಕೊಳ್ಳಬೇಕಿದೆ ಎಂದು ಖ್ಯಾತ ಹಾಸ್ಯ ಭಾಷಣಕಾರರಾದ ರಾಘವೇಂದ್ರ ಆಚಾರ್ಯ ಹೇಳಿದರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಸಿಎ ವಿಭಾಗದ ವತಿಯಿಂದ ಬುಧವಾರ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ಟೆಕ್ ಕ್ರಂಚ್’ ಯುಜಿ ಫೆಸ್ಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಧುನಿಕ ಶೈಲಿಯ ಬದುಕಿನಲ್ಲಿ ಯುವ ಸಮೂಹ ದ್ವಂದ್ವಗಳೊಳಗೆ ಸಿಲುಕಿಕೊಂಡಿದ್ದಾರೆ. ತನ್ನನ್ನು ತಾನು ಹುಡುಕಿಕೊಂಡು ದೂರದ ಊರುಗಳಿಗೆ ತಿರುಗಾಡುತ್ತಾರೆ ವಿನಃ. ತನ್ನ ಸುತ್ತಲಿನ ವಾತಾವರಣದಿಂದಲೇ ಬದುಕಿಗೆ ಪ್ರೇರಣೆ ಪಡೆಯುವ ಅವಕಾಶಗಳನ್ನು ಹುಡುಕಿಕೊಳ್ಳುವುದರಲ್ಲಿ ಸೋತುಬಿಟ್ಟಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಮಾತನಾಡಿ, ಮನುಷ್ಯ ಸದಾ ಚಟುವಟಿಕೆಗಳಿಂದ ಕೂಡಿರಬೇಕು. ಬದುಕು ಹೇಗೊ ಆಯಿತು ಎಂಬ ತಾತ್ಸಾರಕ್ಕಿಂತ, ಹೀಗೆ ಆಗಬೇಕು ಎಂಬ ಸ್ಪಷ್ಟನೆ ಇರಲಿ. ಮನುಷ್ಯನ ಜೀವನದಲ್ಲಿ‌ ಎಲ್ಲಾ ಪ್ರಾಕಾರಗಳು ಇರಬೇಕು. ಸಂತೋಷವೆಂಬ ಪ್ರಕಾರ ಮೇಲುಗೈ ಸಾಧಿಸಬೇಕು.

ಯಾವಾಗಲೂ ನಗುವ ವ್ಯಕ್ತಿ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಹೊಂದಿರುತ್ತಾನೆ. ಅಂತಹ ಉಲ್ಲಾಸದಾಯಕ ಬದುಕು ನಿಮ್ಮದಾಗಬೇಕಿದೆ. ನಿಜವಾದ ನಾಯಕ ಮತ್ತಷ್ಟು ನಾಯಕರನ್ನು ಸೃಷ್ಟಿಸುತ್ತಾನೆ. ಕೇವಲ ಹಿಂಬಾಲಕರನ್ನು ಸೃಷ್ಟಿಸಿಕೊಳ್ಳುವವರು ಎಂದಿಗೂ ನಾಯಕರಾಗಲಾರ ಎಂದು ಹೇಳಿದರು.

ಹಾಸ್ಯ ಭಾಷಣಕಾರ ಉಮೇಶ್ ಗೌಡ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಶೈಕ್ಷಣಿಕ ಆಡಳಿತಾಧಿಕಾರಿ ಎಂ.ಎನ್.ರಾಮಚಂದ್ರ, ಜೆ.ಎನ್.ಎನ್.ಸಿ.ಇ ಪ್ರಾಂಶುಪಾಲರಾದ ಡಾ.ಪಿ.ಮಂಜುನಾಥ, ಎಂಸಿಎ ವಿಭಾಗದ ನಿರ್ದೇಶಕರಾದ ಡಾ.ಪ್ರಭುದೇವ, ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಶ್ರೀಕಾಂತ್, ಕಾರ್ಯಕ್ರಮ ಸಂಯೋಜಕರಾದ ಕೆ.ಎಲ್.ಅರುಣ್ ಕುಮಾರ್, ಹೆಚ್.ಟಿ.ಮಂಜುನಾಥ, ವಿದ್ಯಾರ್ಥಿ ಸಂಯೋಜಕರಾದ ಅಮಿತ್, ಕವನ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

ಪದವಿ ಕಾಲೇಜುಗಳ ಸುಮಾರು ಮೂವತ್ತಕ್ಕು ಹೆಚ್ಚು ತಂಡಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago