ಎರಡು ಗೂಡ್ಸ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ
ಸಾಗರ : ತಾಲೂಕಿನ ಆನಂದಪುರ ಸಮೀಪದ ಬೈರಾಪುರದ ಪೀರನಕಣಿವೆ ತಿರುವಿನ ಹತ್ತಿರ ಎರಡು ಗೂಡ್ಸ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ (Accident) ಘಟನೆ ನಡೆದಿದೆ.
ಆನಂದಪುರದಿಂದ ಶಿಕಾರಿಪುರ ಕಡೆಗೆ ಅಕ್ಕಿ ಲೋಡ್ ಇದ್ದ ಗೂಡ್ಸ್ ವಾಹನಕ್ಕೂ ಹಾಗೂ ಆನಂದಪುರದಿಂದ ಶಿಕಾರಿಪುರದ ತೆರಳುತ್ತಿದ್ದ ಗೂಡ್ಸ್ ವಾಹನಕ್ಕೆ ಮುಖಾಮುಖಿ ಡಿಕ್ಕಿಯಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ.
ಕೂಡಲೇ ತೀವ್ರ ಗಾಯಗೊಂಡಿದ್ದ ಚಾಲಕನನ್ನು ಆನಂದಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಆನಂದಪುರ112 ಪೊಲೀಸ್ ಸಿಬ್ಬಂದಿಗಳು ತೆರಳಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ.