Categories: Shivamogga

ಎಲ್ಲಾ ಗ್ರಾಪಂ ಪಿಡಿಒಗಳು ತಮ್ಮ ಕಾರ್ಯನಿರ್ವಹಣೆಯ ಸ್ಥಳದಲ್ಲಿಯೇ ವಾಸಿಸುವಂತೆ ಆಗ್ರಹಿಸಿ ಸಿಎಂಗೆ ಮನವಿ

ಶಿವಮೊಗ್ಗ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಪಿಡಿಒಗಳು ತಮ್ಮ ಕಾರ್ಯನಿರ್ವಹಣೆಯ ಸ್ಥಳದಲ್ಲಿಯೇ ವಾಸಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘ ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ.


ಗ್ರಾಮಗಳು ಗಟ್ಟಿಗೊಂಡಾಗ ಮಾತ್ರ ಅಭಿವೃದ್ಧಿ ಆಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಜನಪರ ಯೋಜನೆಗಳು ಪಂಚಾಯತ್ ಮಟ್ಟದಲ್ಲಿ ಅನುಷ್ಠಾನಗೊಳ್ಳಬೇಕಾಗಿದೆ. ಈ ಅನುಷ್ಠಾನಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಹಾಗಾಗಿ ಪಿಡಿಒಗಳು ತಾವು ಕೆಲಸ ಮಾಡುವ ಸ್ಥಳದಲ್ಲಿ ವಾಸಿಸಿದರೆ ಯೋಜನೆಗಳು ತಲುಪಲು ಅನುಕೂಲವಾಗುತ್ತದೆ ಎಂದು ಮನವಿದಾರರು ತಿಳಿಸಿದರು.


ನರೇಗಾ, ಕುಡಿಯುವ ನೀರು, ನೈರ್ಮಲ್ಯ, ಸ್ವಚ್ಛ ಭಾರತ ಮಿಷನ್, ಮುಖ್ಯಮಂತ್ರಿ ಗ್ರಾಮ ವಿಕಾಸ ಜಲಾಮೃತ, ಗ್ರಾಮೀಣ ಸಂಪರ್ಕ, ಸುವರ್ಣ ಗ್ರಾಮೋದಯ ಇದರ ಜೊತೆಗೆ ಆನ್‌ಲೈನ್ ಸೇವೆಗಳು, ಸರ್ಕಾರದ ಪಂಚ ಗ್ಯಾರಂಟಿಗಳು. ಅದರಲ್ಲಿ ಮಹಿಳೆಯರಿಗೆ ನೀಡುವ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಮುಂತಾದ ಎಲ್ಲಾ ಜನಪರ ಯೋಜನೆಗಳು ಸಮರ್ಥವಾಗಿ ಜಾರಿಯಾಗಬೇಕಾದರೆ ಪಿಡಿಒಗಳ ಪಾತ್ರ ಮಹತ್ವದ್ದಾಗಿದೆ ಎಂದು ಮನವಿದಾರರು ಹೇಳಿದ್ದಾರೆ.


ಜೊತೆಗೆ ಜಿಲ್ಲೆಯಲ್ಲಿ ಮಳೆ ಇಲ್ಲ. ಬರಪೀಡಿತ ಎಂದು ಈಗಾಗಲೇ ಘೋಷಿತವಾಗಿದೆ. ಇಂತಹ ಸಂದರ್ಭದಲ್ಲಿ ಪಿಡಿಒಗಳ ಜವಾಬ್ದಾರಿ ಹೆಚ್ಚಿದೆ. ಆದರೆ ಈ ಪಿಡಿಒಗಳು  ಹಳ್ಳಿಗಳಲ್ಲಿ ವಾಸ ಮಾಡದೆ ನಗರದಲ್ಲಿ ಇರುತ್ತಾರೆ. ಸಮಯಕ್ಕೆ ಸರಿಯಾಗಿ ಬರಲು ಆಗುವುದಿಲ್ಲ. ಜೊತೆಗೆ ಬೇಗನೆ ಹೋಗಿಬಿಡುತ್ತಾರೆ. ಈಗಾಗಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಿಡಿಒಗಳು ಕಾರ್ಯನಿರ್ವಹಣೆ ಸ್ಥಳದಲ್ಲೆ ವಾಸಿಸಬೇಕೆಂದು ಸೂಚಿಸಿದ್ದಾರೆ. ಹಾಗಾಗಿ ಪಿಡಿಒಗಳಿಗೆ ಕಾರ್ಯ ಸ್ಥಳದಲ್ಲೇ ವಾಸಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.


ಈ ಸಂದರ್ಭದಲ್ಲಿ ಜಿಲ್ಲಾ ವಕ್ತಾರ ರಮೇಶ್ ಶೆಟ್ಟಿ ಶಂಕರಘಟ್ಟ, ಕೆಪಿಸಿಸಿ ಸಂಯೋಜಕ ಆರ್. ಮೋಹನ್, ಹಿಂದುಳಿದ ವರ್ಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಡಿ.ಮಂಜುನಾಥ್, ಪ್ರಮುಖರಾದ ಸಿದ್ದಪ್ಪ, ತಾಕ್ರಾ ನಾಯ್ಕ, ಶಿಕಾರಿಪುರ ಸುರೇಶ್ ಸೇರಿದಂತೆ ಹಲವರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago