ಏಕತೆ, ವೃತ್ತಿ ಪಾವಿತ್ರ್ಯತೆ, ಪ್ರಾಮಾಣಿಕತೆ ಇಲ್ಲದಿದ್ದರೆ ಸಂಘ-ಸಂಸ್ಥೆಗಳು ಬೆಳೆಸಲು ಸಾಧ್ಯವಿಲ್ಲ ; ಎನ್ ದತ್ತಾತ್ರೇಯ ಉಡುಪ


ಹೊಸನಗರ: ಯಾವುದೇ ಸಂಘ ಸಂಸ್ಥೆಗಳು ಬೆಳೆಯ ಬೇಕಾದರೆ ಸಂಘದಲ್ಲಿರುವ ಸದಸ್ಯರು ಒಗ್ಗಟ್ಟು ಪ್ರದರ್ಶನ-ತಾವು ಮಾಡುವ ಕೆಲಸದಲ್ಲಿ ಏಕತೆ, ವೃತ್ತಿಪಾವಿತ್ರ್ಯತೆ, ಪ್ರಾಮಾಣಿಕತೆ ಇದ್ದಲ್ಲಿ ಮಾತ್ರ ತಾವು ಮಾಡುವ ಕೆಲಸದಲ್ಲಿ ಆತ್ಮತೃಪ್ತಿ ಇರುವುದರ ಜೊತೆಗೆ ಸಂಘ-ಸಂಸ್ಥೆಗಳನ್ನು ಬೆಳೆಸಲು ಸಾಧ್ಯ ಎಂದು ರಾಮಕೃಷ್ಣ ಮೆಡಿಕಲ್ಸ್ ಮಾಲೀಕರಾದ ಎನ್ ದತ್ತಾತ್ರೇಯ ಉಡುಪರವರು ಹೇಳಿದರು.


ಪಟ್ಟಣದ ಗಾಯತ್ರಿ ಮಂದಿರದಲ್ಲಿ ಶಿವಮೊಗ್ಗ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಹೊಸನಗರದಲ್ಲಿ ಮಾಸಿಕ ಸಭೆ ನಡೆಸಿ ಮಾತನಾಡಿ, ಸಂಘದ ಸದಸ್ಯರು ತಾವು ಮಾಡುವ ಉದ್ಯೋಗದಲ್ಲಿ ಸ್ಪರ್ಧೆ ಇದ್ದೇ ಇರುತ್ತದೆ. ಅದನ್ನು ಉದ್ಯೋಗದಲ್ಲಿ ಮಾತ್ರ ತೋರಿಸಬೇಕು. ಆದರೆ ಅದನ್ನು ಸಂಘದ ಒಳಗೆ-ಹೊರಗೆ ತೋರಿಸಬಾರದು ಸಂಘದ ಸದಸ್ಯರು ಒಗ್ಗಟ್ಟಿನಿಂದ ಸಂಘದ ಕಾರ್ಯಚಟುವಟಿಕೆಯಲ್ಲಿ ಭಾಗವಹಿಸಬೇಕು ಹಾಗೂ ಸಂಘದ ಏಳಿಗೆಗಾಗಿ ಶ್ರಮಿಸಬೇಕೆಂದರು.


ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಅಬ್ದುಲ್ ಕಯ್ಯೂಮ್‌ರವರು ವಹಿಸಿ ಮಾತನಾಡಿ, ಸಂಘದ ಏಳಿಗೆಗೆ ಎಲ್ಲರೂ ಶ್ರಮಿಸಬೇಕು ಸಂಘದ ಸದಸ್ಯರಲ್ಲಿ ಬಿನ್ನಾಭಿಪ್ರಾಯ ಬಾರರಂತೆ ನೋಡಿಕೊಳ್ಳಬೇಕೆಂದರು.


ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಕಾರ್ಯದರ್ಶಿ ಚಂದ್ರಶೇಖರ್, ಸಹ ಕಾರ್ಯದರ್ಶಿ ಚಂದ್ರಶೇಖರ್, ಖಾಜಾಂಚಿ ಕುಮಾರ್, ವಿನಾಯಕ, ಸತೀಶ್, ಗೋಪಾಲ್, ವೆಂಕಟೇಶ್, ಮಂಜುನಾಥ್, ಪ್ರಕಾಶ್, ರುದ್ರಪ್ರಸಾದ್, ದೀಪಕ್ ಮೆಡಿಕಲ್ಸ್ ಮಾಲೀಕ ದೀಪಕ್ ಡೊಮೆಲ್ಲೋ, ರಾಘವೇಂದ್ರ ಮೆಡಿಕಲ್ಸ್ ಮಾಲೀಕ ಡೊಮೆಲ್ಲೋ, ಕಾರ್ತಿಕ್ ಮೆಡಿಕಲ್ಸ್ ಮಾಲೀಕ ವೀರಪಾಕ್ಷಪ್ಪ, ಕಾಡುವಳ್ಳಿ ಮೆಡಿಕಲ್ಸ್ ಮಾಲೀಕರಾದ ವಿನಯ್ ಕುಮಾರ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.


ರಾಮಕೃಷ್ಣ ಮೆಡಿಕಲ್ಸ್ ಮಾಲೀಕರಾದ ದತ್ತಾತ್ರೇಯ ಉಡುಪರವರ ಜನ್ಮದಿನಾಚರಣೆಯನ್ನು ಈ ಸಂದರ್ಭದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಕು|| ಯಶಸ್ವಿನಿಯವರನ್ನು ಅಭಿನಂದಿಸಲಾಯಿತು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

5 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

5 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago