ಏಕಾಏಕಿ ವಿದ್ಯುತ್ ದರ ಏರಿಕೆ ಖಂಡಿಸಿ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ
ಶಿವಮೊಗ್ಗ : ಏಕಾಏಕಿ ವಿದ್ಯುತ್ ದರ ಏರಿಕೆ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿತು.
ಶಿವಮೊಗ್ಗದ ಅಶೋಕ ಸರ್ಕಲ್ ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, 200 ಯೂನಿಟ್ ಫ್ರೀ ವಿದ್ಯುತ್ ಕೊಡ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಕನಿಷ್ಟ ದರವನ್ನು 125 ರೂ. ನಿಂದ 200 ರೂ. ಗೆ ಹೆಚ್ಚಿಸಿದೆ. ರೈತ ಹಾಗೂ ಜನ ವಿರೋಧಿ ಕ್ರಮವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ನಗರ ಶಾಸಕ ಎಸ್.ಎನ್ ಚನ್ನಬಸಪ್ಪ, ಮಾಜಿ ಎಂ.ಎಲ್.ಸಿ ಆರ್.ಕೆ.ಸಿದ್ದರಾಮಣ್ಣ, ಬಿಜೆಪಿ ವಿಭಾಗ ಪ್ರಮುಖ್ ಗಿರೀಶ್ ಪಟೇಲ್, ಪ್ರಮುಖರಾದ ಜಗದೀಶ್, ಜ್ಯೋತಿಪ್ರಕಾಶ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.