Categories: Shivamogga

ಏ.15 ರ ಬಳಿಕ ಬಾಳೆಬರೆ ಘಾಟ್ ಸಂಚಾರಕ್ಕೆ ಮುಕ್ತ ; ಮತ್ತೆ 10 ದಿನ ಅವಧಿ ವಿಸ್ತರಣೆ ಮಾಡಿದ್ದು ಯಾಕೆ ಗೊತ್ತಾ ?

ಶಿವಮೊಗ್ಗ : ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ (ಹುಲಿಕಲ್‌) ಘಾಟಿಯ ಕಾಂಕ್ರಿಟೀಕರಣ ಬಹುತೇಕ ಪೂರ್ಣಗೊಂಡಿದೆ. ಕೊನೆಯ ಹಂತವಷ್ಟೇ ಬಾಕಿಯಿದೆ. ಕ್ಯೂರಿಂಗ್‌ ನಡೆಯುತ್ತಿದ್ದು, ಏ. 15ರ ಬಳಿಕ ಸಂಚಾರ ಪುನರಾರಂಭಗೊಳ್ಳುತ್ತಿದೆ.

ಕುಂದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಹಾದುಹೋಗುವ ಈ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅಂದಾಜು 1 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ 2.5 ಕಿ.ಮೀ. ಸೇರಿದಂತೆ ಒಟ್ಟು 3.5 ಕಿ.ಮೀ. ದೂರ ಅಗಲಗೊಳಿಸುವಿಕೆ, ಕಾಂಕ್ರಿಟೀಕರಣ, ರಕ್ಷಣ ಗೋಡೆ ನಿರ್ಮಾಣ ನಡೆಯುತ್ತಿದೆ.

ಏ. 15ಕ್ಕೆ ಮುಕ್ತ
ಕಳೆದ ಫೆ. 5ರಿಂದ ಏ. 5ರ ವರೆಗೆ ಕಾಮಗಾರಿ ಸಲುವಾಗಿ ಘಾಟಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಉಡುಪಿ ಜಿಲ್ಲಾ ವ್ಯಾಪ್ತಿಯ ಕಾಂಕ್ರಿಟೀಕರಣ ಮುಗಿದಿದೆ. ಕ್ಯೂರಿಂಗ್‌ ನಡೆಯುತ್ತಿದೆ. ಅಪಾಯಕಾರಿ ತಿರುವುಗಳಲ್ಲಿ ಅಗಲಗೊಳಿಸುವಿಕೆ ಹಾಗೂ ರಕ್ಷಣ ಗೋಡೆ ನಿರ್ಮಾಣವಾಗಿದೆ. ಶಿವಮೊಗ್ಗ ವ್ಯಾಪ್ತಿಯಲ್ಲಿ ಈವರೆಗೆ 2 ಕಿ.ಮೀ. ಕಾಂಕ್ರಿಟೀಕರಣ ನಡೆದಿದ್ದು, 500 ಮೀ.ಗಳಷ್ಟು ಬಾಕಿಯಿದೆ. ಇದಕ್ಕೆ ಹೆಚ್ಚುವರಿ 10 ದಿನಗಳ ಅಗತ್ಯವಿದೆ. ಆದರೂ ಕ್ಯೂರಿಂಗ್‌ ಪೂರ್ಣಗೊಳ್ಳುತ್ತಿದ್ದಂತೆ ಒಂದು ಬದಿಯಿಂದ ಸಂಚಾರಕ್ಕೆ ಅನುವು ಮಾಡಿಕೊಡುಲಾಗುತ್ತದೆ. ಏ. 15ರ ನಂತರ ಸಂಚಾರಕ್ಕೆ ಮುಕ್ತವಾಗುತ್ತದೆ.

ಬದಲಿ ಮಾರ್ಗ ಯಾವುದು ?

ತೀರ್ಥಹಳ್ಳಿ, ಆಗುಂಬೆ, ಸೋಮೇಶ್ವರ, ಹಾಲಾಡಿ ಬಸ್ರೂರು ಮಾರ್ಗವಾಗಿ ಕುಂದಾಪುರಕ್ಕೆ ಲಘುವಾಹನಗಳು ಸಂಚರಿಸಬಹುದಾಗಿದೆ. ಭಾರಿ ವಾಹನಗಳು ತೀರ್ಥಹಳ್ಳಿ, ಕಾನುಗೋಡು, ನಗರ, ಕೊಲ್ಲೂರು, ಮೂಲಕ ಕುಂದಾಪುರಕ್ಕೆ ಸಂಚರಿಸಬಹುದಾಗಿದೆ.

ಹೊಸನಗರ ಮೂಲಕ ಕುಂದಾಪುರಕ್ಕೆ ಸಂಚರಿಸುವ ಲಘು ಅಥವಾ ಭಾರಿ ವಾಹನಗಳು ಹೊಸನಗರ, ನಗರ ಹಾಗೂ ಕೊಲ್ಲೂರು ರಸ್ತೆಯ ಮೂಲಕ ಕುಂದಾಪುರಕ್ಕೆ ಸಂಚರಿಸಬಹುದಾಗಿದೆ.

ಅವಧಿ ವಿಸ್ತರಣೆಗೆ ಕಾರಣ ಏನು ?

ಅವಧಿ ವಿಸ್ತರಣೆಗೆ ಕಾಮಗಾರಿ ನಡೆಸುವ ಯಂತ್ರೋಪಕರಣಗಳು ಪದೇ ಪದೇ ದುರಸ್ತಿಗೆ ಬಂದ ಪರಿಣಾಮ ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಲು ಸಾಧ್ಯವಾಗಿಲ್ಲ. ಹಾಗಾಗಿ ಏ.15 ರ ವರೆಗೆ ಕಾಮಗಾರಿ ಅವಧಿಯನ್ನ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸ್ಪಷ್ಟನೆ ನೀಡಿದ್ದಾರೆ.

Malnad Times

Recent Posts

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

1 hour ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

14 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

17 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

17 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

22 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

24 hours ago