ಏ. 23 ರಂದು ಅಲಸೆ ಶ್ರೀಚಂಡಿಕೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಮಹೋತ್ಸವ
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಅಲಸೆ ಶ್ರೀಶಂಕರೇಶ್ವರ ಮತ್ತು ಶ್ರೀಚಂಡಿಕೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಏಪ್ರಿಲ್ 23 ರಂದು `ವಾರ್ಷಿಕ ವರ್ಧಂತಿ’ ಮಹೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಧರ್ಮದರ್ಶಿ ಶ್ರೀನಿವಾಸ್ಭಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 23 ರಂದು ಮಂಗಳವಾರ ಲೋಕಕಲ್ಯಾರ್ಥವಾಗಿ ಬೆಳಗ್ಗೆ ಗಣಪತಿ ಪ್ರಾರ್ಥನೆ ಹಾಗೂ ಶ್ರೀರುದ್ರಹೋಮ, ಶ್ರೀದುರ್ಗಾ ಹೋಮ ವಿಶೇಷಪೂಜೆ ಮಹಾಮಂಗಳಾರತಿ ತೀರ್ಥಪ್ರಸಾದ ವಿತರಣೆ ಸಾಮೂಹಿಕ ಅನ್ನಸಂತರ್ಪಣೆ ನಡೆಯಲಿದೆ.
ಇದೇ ದಿನ ರಾತ್ರಿ 9 ಗಂಟೆಗೆ ಶ್ರೀ ಕ್ಷೇತ್ರ ಅಲಸೆ ಶ್ರೀಚಂಡಿಕೇಶ್ವರಿ ನಾಗೇಶ್ವರಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ “ನೂತನ ಪೌರಾಣಿಕ ಪ್ರಸಂಗ’’ ಕಾಲಮಿತಿ ಯಕ್ಷಗಾನ ಪ್ರದರ್ಶನ ಜರುಗಲಿದ್ದು ಸಕಲ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ದರ್ಶನಾಶೀರ್ವಾದ ಪಡೆಯುವಂತೆ ಕೋರಿದ್ದಾರೆ.