ಶಿವಮೊಗ್ಗ : ಎಐಸಿಸಿ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಏ.27 ರಂದು ಶಿವಮೊಗ್ಗಕ್ಕೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಹುಲ್ ಗಾಂಧಿಯವರು ದೆಹಲಿಯಿಂದ ನೇರವಾಗಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ರಾಜ್ಯ ದಲ್ಲಿ ಪ್ರವಾಸ ಮಾಡುತ್ತಿರುವ ಪ್ರಿಯಾಂಕ ಗಾಂಧಿಯವರು ಹೆಲಿಕಾಪ್ಟರ್ ಮೂಲಕ ವಿಮಾನ ನಿಲ್ದಾಣ ಸೇರಲಿದ್ದಾರೆ. ಈ ಇಬ್ಬರೂ ಮಧ್ಯಾಹ್ನ ಸುಮಾರು 12:40ರ ಸಮಯಕ್ಕೆ ಬರಬಹುದು ಇಲ್ಲಿ ಸುಮಾರು 45 ನಿಮಿಷ ಇರುತ್ತಾರೆ. ಈ ವೇಳೆ ಜಿಲ್ಲಾ ಕಾಂಗ್ರೆಸ್ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಉಡುಪಿ ಜಿಲ್ಲೆ ಕಾಪುಗೆ ತೆರಳುವರು ಎಂದರು.
ಅವರು ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಆದರೆ ಸ್ಥಳದ ಬಗ್ಗೆ ಇನ್ನೂ ಖಚಿತವಾಗಿ ತಿಳಿದಿಲ್ಲ ಇದಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಅವರು ಅಧಿಕೃತವಾಗಿ ಅನುಮತಿ ನೀಡಿದ ನಂತರ ಸ್ಥಳದ ಬಗ್ಗೆ ಮಾಹಿತಿ ನೀಡಲಾಗುವುದು ಭದ್ರತೆ ದೃಷ್ಟಿಯಿಂದ ಕಾರ್ಯಕರ್ತರಿಗೆ ಇವರನ್ನು ಭೇಟಿ ಮಾಡಲು ಅವಕಾಶ ಇರುವುದಿಲ್ಲ. ಪಕ್ಷದ ಮುಖಂಡರು ಜೊತೆಗೆ ಇರುತ್ತಾರೆ. ಜೊತೆಗೆ ಪತ್ರಕರ್ತರನ್ನು ಆಹ್ವಾನಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ಕಾಂಗ್ರೆಸ್ ಪರ ಇಡೀ ಜಿಲ್ಲೆಯಲ್ಲಿ ಪೂರಕವಾದ ವಾತಾವರಣವಿದೆ. ಬಿಜೆಪಿಯ ವಿರುದ್ಧದ ಗಾಳಿ ಬೀಸುತ್ತಿದೆ ಎಂದರು.
ಶಿವಮೊಗ್ಗದಲ್ಲಿ ಕಾಂಗ್ರೆಸ್ಸಿನ ಬಹಳಷ್ಟು ಮಂದಿ ಜೆಡಿಎಸ್ ಸೇರುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮತ್ತು ಅವರ ಬೆಂಬಲಿಗರು ಪಕ್ಷ ಸೇರಿದ್ದಾರೆ ಅಷ್ಟೆ. ಇದು ಅಂತಹ ಬಹುದೊಡ್ಡ ಪರಿಣಾಮವೇನೂ ಬೀರುವುದಿಲ್ಲ ಪಕ್ಷ ಗಟ್ಟಿ ಎನ್ನುವುದನ್ನು ಕಾರ್ಯಕರ್ತರು ಮತ್ತು ಮತದಾರರು ಸಾಬೀತುಪಡಿಸುತ್ತಾರೆ. ಇಂತಹ ವಿಷಯಗಳ ಬಗ್ಗೆ ನಾವೀಗ ತಲೆಕೆಡಿಸಿಕೊಳ್ಳುತ್ತಾ ಕೂರಲು ಸಮಯವಿಲ್ಲ. ಏನಿದ್ದರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ಆಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಹೆಚ್.ಎಂ. ಚಂದ್ರಶೇಖರ್, ಚಂದ್ರಭೂಪಾಲ್, ಎಸ್.ಪಿ. ಶೇಷಾದ್ರಿ ಇತರರಿದ್ದರು.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…