ಹೊಸನಗರ: ಶೂರತ್ವ ಹೊಂದಿದ ಒನಕೆ ಓಬವ್ವ ಕೇವಲ ಸ್ತ್ರೀ ಪರವಾದ ಶಕ್ತಿ ಅಷ್ಟೇ ಅಲ್ಲ ಇಡೀ ಶೋಷಿತ ಸಮುದಾಯದ ಧೀಮಂತ ಮಹಿಳೆ ಎಂದು ಹೊಸನಗರ ಗ್ರೇಡ್2ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋರವರು ಹೇಳಿದರು.
ತಾಲ್ಲೂಕು ಕಛೇರಿಯ ಆವರಣದಲ್ಲಿ ರಾಜ್ಯದ ಧೀಮಂತ ಮಹಿಳೆಯರಲ್ಲಿ ಒಂದಾಗಿರುವ ಒನಕೆ ಓಬವ್ವರವರ ಜಯಂತಿ ಆಚರಿಸಿ ಮಾತನಾಡಿದರು.
ತಳ ಸಮುದಾಯದ ಹೆಣ್ಣು ಮಗಳೊಬ್ಬರು ಚರಿತ್ರೆಯಲ್ಲಿ ತನ್ನಲ್ಲಿನ ಶೂರತ್ವದಿಂದ ವಿಶಿಷ್ಟ ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರ ಇಂತಹ ವ್ಯಕ್ತಿತ್ವ ಹೊಂದಿದ ಮಹಿಳೆ ಛಲವಾದಿ ಜನಾಂಗಕ್ಕೆ ಸೇರಿದವರು ಎನ್ನುವ ಸಿನಿಮಾ ನೋಡಿದ ನಂತರ ಗೊತ್ತಾಗಿದೆ. ಸಮಾಜದಲ್ಲಿ ಇಂತಹ ಸಾಧಕರನ್ನು ಜಾತಿಗೆ ಸೀಮಿತಗೊಳಿಸಬಾರದು ರಾಣಿ ಅಬ್ಬಕ್ಕ, ಕೆಳದಿ ಚನ್ನಮಾಜೀ, ಒನಕೆ ಓಬವ್ವ ಅವರು ವೈಯಕ್ತಿಕ ಬದುಕಿನ ಜೊತೆಗೆ ಶತ್ರುಗಳ ಜೊತೆಗೆ ಸೆಣಸಾಡಿ ತಮ್ಮ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಆದರ್ಶಪ್ರಾಯರಾಗಿದ್ದಾರೆ ಎಂದರು.
ಈ ಜಯಂತಿ ಸಂದರ್ಭದಲ್ಲಿ ತಾಲ್ಲೂಕು ಕಛೇರಿಯ ಪ್ರಥಮ ದರ್ಜೆ ಗುಮಾಸ್ಥರಾದ ಚಿರಾಗ್, ರೆವಿನ್ಯೊ ಇನ್ಸ್ಪೆಕ್ಟರ್ ರೇಣುಕಯ್ಯ, ಕಛೇರಿ ಸಿಬ್ಬಂದಿ ಸತೀಶ್ ಚುನಾವಣೆ ಶಿರಾಸ್ಥೆದಾರ್ ಸತೀಶ್, ಗ್ರಾಮ ಆಡಳಿತಾಧಿಕಾರಿ ಬಸವರಾಜ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…