ಕಂಕಳ್ಳಿ ಗವಿಸಿದ್ದೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ನವದುರ್ಗಾದೇವಿಯ ಶರನ್ನವರಾತ್ರಿ ಮಹೋತ್ಸವ ಸುಸಂಪನ್ನ

ರಿಪ್ಪನ್‌ಪೇಟೆ: ಕಂಕಳ್ಳಿ ಶ್ರೀ ಗವಿಸಿದ್ದೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ನವದುರ್ಗಾದೇವಿಯ ಶರನ್ನವರಾತ್ರಿ ಮಹೋತ್ಸವ ಮತ್ತು ಪಲ್ಲಕ್ಕಿ ಉತ್ಸವ ಹಾಗೂ ಚಂಡಿಕಾ ಹೋಮ ಕಾರ್ಯವು ಕಂಕಳ್ಳಿ ಗವಿಸಿದ್ದೇಶ್ವರ ಸ್ವಾಮಿಯ ದೇವಸ್ಥಾನದ ಧರ್ಮಾಧಿಕಾರಿ ಸೋಮಶೇಖರ ಇವರ ನೇತೃತ್ವದಲ್ಲಿ ಸಂಭ್ರಮ ಸಡಗರದೊಂದಿಗೆ ಸಂಪನ್ನಗೊಂಡಿತು.

ತುಮಕೂರು ನಗರದ ಹೊನ್ನೂಡಿಕೆ ಹ್ಯಾಂಡ್ ಚೆಕ್ ಪೋಸ್ಟ್ ಬಳಿ ನಿರ್ಮಿಸಲಾಗಿರುವ ಕಂಕಳ್ಳಿ ಶ್ರೀ ಗವಿಸಿದ್ದೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ `ನವದುರ್ಗಾದೇವಿ’ ಮತ್ತು ಗವಿಸಿದ್ದೇಶ್ವರ ಸ್ವಾಮಿಗೆ ಅಭಿಷೇಕ ಪೂಜೆ ಮತ್ತು ದೇವಿಯ ಪಾರಾಯಣ ಹಾಗೂ ಶರನ್ನವರಾತ್ರಿಯ ಅಂಗವಾಗಿ ದೇವಿಯ ಸನ್ನಿಧಿಯಲ್ಲಿ ಚಂಡಿಕಾಹೋಮ ಜರುಗಿತು. ನಂತರ ದೇವಿಯ ಪಲ್ಲಕ್ಕಿ ಉತ್ಸವವು ಶ್ರದ್ದಾಭಕ್ತಿಯಿಂದ ಜರುಗಿ ದೇವಸ್ಥಾನದ ಮುಂಭಾಗದಲ್ಲಿ ಬನ್ನಿಯನ್ನು ಪರಸ್ಪರ ವಿನಿಮಯ ಮಾಡಿಕೊಳ್ಳುವುದರೊಂದಿಗೆ ಶುಭಕೋರಿದರು.

ಇದೇ ಸಂದರ್ಭದಲ್ಲಿ ಸೇವಾ ಕರ್ತರನ್ನು ಮತ್ತು ನಿವೃತ್ತ ನೌಕರವರ್ಗವನ್ನು ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಂಕಳ್ಳಿ ಗವಿಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಧರ್ಮಾಧಿಕಾರಿ ಸೋಮಶೇಖರಯ್ಯ, ಮಳವಳ್ಳಿ ಚನ್ನಪ್ಪ, ಶಿವಪ್ಪ, ಗಂಗಾಧರ, ಕೊಲ್ಲೂರಪ್ಪ ವಾಟಗಾರು, ಕುಕ್ಕಳಲೇ ಈಶ್ವರ, ಕೆರೆಹಿತ್ತಲು ಗಿರೀಶ, ರುದ್ರಪ್ಪ ಕಂಕಳ್ಳಿ, ವೀರಭದ್ರಪ್ಪ ಬಡಗೋಡು ಇನ್ನಿತರರು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

18 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

22 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

22 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago