Categories: ShivamoggaSoraba

ಕನಿಷ್ಟ ಅಭಿನಂದನೆಯನ್ನೂ ಸಲ್ಲಿಸದ ಮಾಜಿ ಶಾಸಕ ಕುಮಾರ್‌ ಬಂಗಾರಪ್ಪ ಬಿಜೆಪಿ ಬ್ಯಾನರ್‌ಗಳಲ್ಲಿ ಅನಿವಾರ್ಯವೇ ?

ಸೊರಬ : ದುರಹಂಕಾರದ ವರ್ತನೆಯಿಂದ ಕಾರ್ಯಕರ್ತರನ್ನು ದೂರವಾಗಿಟ್ಟು ಬಿಜೆಪಿಯ (BJP) ತತ್ವ-ಸಿದ್ಧಾಂತವನ್ನು ಬದಿಗೊತ್ತಿ ಮತ ನೀಡಿದ ಮತದಾರರಿಗೆ (Voter’s) ಇಲ್ಲಿಯವರೆಗೂ ಕನಿಷ್ಟ ಅಭಿನಂದನೆಯನ್ನೂ ಸಲ್ಲಿಸದ ಮಾಜಿ ಶಾಸಕ ಕುಮಾರ್‌ ಬಂಗಾರಪ್ಪ (Kumar Bangarappa) ಬಿಜೆಪಿ ಬ್ಯಾನರ್‌ಗಳಲ್ಲಿ ಅನಿವಾರ್ಯವೇ ? ಎಂದು ಬಿಜೆಪಿ ಮುಖಂಡ ಡಾ. ಜ್ಞಾನೇಶ್ ಪ್ರಶ್ನಿಸಿದರು.


ಮಂಗಳವಾರ ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ತಾಲ್ಲೂಕಿನ ಬಿಜೆಪಿ ಘಟಕದಲ್ಲಿ ಸಂಘಟನೆ ಕೊರತೆ ಎದುರಾಗಿದ್ದು, ಹೊಸ ನಾಯಕತ್ವದ ನಿರೀಕ್ಷೆಯಲ್ಲಿ ಕಾರ್ಯಕರ್ತರಿದ್ದಾರೆ ವಿಧಾನಸಭೆ ಚುನಾವಣೆ ನಂತರ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಪಕ್ಷದ ಚಟುವಟಿಕೆಗಳಿಂದ ದೂರವುಳಿದಿದ್ದಲ್ಲದೆ ಕ್ಷೇತ್ರದ ಕಡೆಗೂ ಮುಖಮಾಡಿಲ್ಲ ಎಂದರು.


ಕಾರ್ಯಕರ್ತರು ಅವರ ನಾಯಕ್ವದ ಮೇಲೆ ಇಟ್ಟುಕೊಂಡ ನಂಬಿಕೆ ಹುಸಿಯಾಗಿದೆ. ಅಧಿಕಾರವಿದ್ದಾಗ ಕಾರ್ಯಕರ್ತರನ್ನು ದೂರವಿಟ್ಟು ದುರಾಡಳಿತ ವರ್ತನೆ ತೋರಿ ಈಗ ಕ್ಷೇತ್ರದ ಕಡೆ ಮುಖ ಮಾಡುತ್ತಿಲ್ಲ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು, ಮುಖಂಡರುಗಳ ಸಮಸ್ಯೆಯಲ್ಲಿದ್ದಾಗ ಸೌಜನ್ಯಕ್ಕೂ ಭೇಟಿ ಮಾಡಿ ಅವರ ಕಷ್ಟ ಆಲಿಸದೆ ಬೆಂಗಳೂರಿನಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ಆರೋಪಿಸಿದರು.


ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿ ದೇಶದಾದ್ಯಂತ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸುತ್ತಿದ್ದರೆ ಕುಮಾರ್ ಬಂಗಾರಪ್ಪ ಯಾವುದೇ ಖುಷಿ ವ್ಯಕ್ತಪಡಿಸಿಲ್ಲ. ಹಬ್ಬವೇ ಮುತಾದವುಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಭಿನಂದನೆ ಸಲ್ಲಿಸುವ ಕುಮಾರ್ ಬಂಗಾರಪ್ಪ ಬಿ.ವೈ.ವಿಜಯೇಂದ್ರ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದರೂ ಸೌಜನ್ಯಕ್ಕೂ ಅಭಿನಂದನೆ ತಿಳಿಸದೆ ಇರುವುದು ಅವರ ಸಣ್ಣತನ ತೋರಿಸುತ್ತದೆ ಎಂದು ಟೀಕಿಸಿದರು.


ಕ್ಷೇತ್ರದ ಸಮಸ್ಯೆ ಬಗ್ಗೆ ಮುಖಂಡರು ದೂರವಾಣಿ ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ. ಯಾವುದಕ್ಕೂ ಸ್ಪಂದಿಸದ ಕುಮಾರ್ ಬಂಗಾರಪ್ಪ ಅವರ ಭಾವಚಿತ್ರವನ್ನು ಪಕ್ಷದ ಬ್ಯಾನರ್ ಗಳಲ್ಲಿ ಹಾಕುವ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿದ ಅವರು ಕುಮಾರ್ ಬಂಗಾರಪ್ಪ ಪಕ್ಷಕ್ಕೆ ಅಷ್ಟು ಅನಿವಾರ್ಯವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುರೇಂದ್ರ ಮಾವಲಿ, ಶಿವಾನಂದ ಇದ್ದರು.

Malnad Times

Recent Posts

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

6 hours ago

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

7 hours ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

17 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

18 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

20 hours ago