ಶಿವಮೊಗ್ಗ: ವಿಮಾನ ನಿಲ್ದಾಣದ ಮೇಲಿರುವ ಕಮಲ ಚಿಹ್ನೆಯನ್ನು ಚುನಾವಣೆಯ ನೀತಿ ಸಂಹಿತೆಯ ಹಿನ್ನಲೆಯಲ್ಲಿ ಬಟ್ಟೆಯಿಂದ ಸಂಪೂರ್ಣವಾಗಿ ಮುಚ್ಚಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಇಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.
ಶಿವಮೊಗ್ಗ ವಿಮಾನ ನಿಲ್ದಾಣ ದಲ್ಲಿ ನೂತನವಾಗಿ ಉದ್ಘಾಟನೆಯಾಗಿರುವ ವಿಮಾನ ನಿಲ್ದಾಣದ ಕಟ್ಟಡದ ವಿನ್ಯಾಸ ಸಂಪೂರ್ಣವಾಗಿ ಬಿಜೆಪಿ ಪಕ್ಷದ ಚಿಹ್ನೆಯಾಗಿರುವ ಕಮಲದ ವಿನ್ಯಾಸದಲ್ಲಿದೆ. ಈ ಬಗ್ಗೆ ಕಟ್ಟಡ ಪ್ರಾರಂಭವಾದಾಗಲು ಸಹ ಬಿಜೆಪಿ ಚಿಹ್ನೆ ಕಮಲವನ್ನು ಪ್ರತಿನಿಧಿಸಬಾರದು ಎಂದು ಸಾರ್ವಜನಿಕರು, ವಿವಿಧ ಸಂಘಟನೆಗಳು ಹೋರಾಟ ಮಾಡಿದ್ದವು. ಆದರೆ ಕಲಮದ ಚಿಹ್ನೆಯನ್ನು ಹಾಗೆ ಉಳಿಸಿಕೊಂಡಿದ್ದಾರೆ. ಇದು ಚುನಾವಣೆಯ ಹಿನ್ನಲೆಯಲ್ಲಿ ನೀತಿ ಸಂಹಿತೆಗೆ ಅಡ್ಡಿ ಬರುತ್ತದೆ ಎಂದು ಮನವಿದಾರರು ದೂರಿದರು.
ಆದ್ದರಿಂದ ಚುನಾವಣಾಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಕಮಲದ ಚಿಹ್ನೆ ಇರುವ ಎಲ್ಲಾ ಭಾಗವನ್ನು ಮುಚ್ಚಬೇಕು. ನೀತಿ ಸಂಹಿತೆಯನ್ನು ಕಾಪಾಡಬೇಕು. ಒಂದು ಪಕ್ಷ ಜಿಲ್ಲಾಡಳಿತ ಅಥವಾ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಕೆಪಿಸಿಸಿ ವತಿಯಿಂದಲೇ ಅದನ್ನು ಮುಚ್ಚಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅದೇ ರೀತಿ ಕೆಎಸ್ಆರ್ಟಿಸಿ ಸರ್ಕಾರಿ ಬಸ್ಗಳ ಮೇಲೆ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಮಂತ್ರಿ ಮತ್ತು ಸಚಿವ ಸಂಪುಟದ ಮಂತ್ರಿಗಳ ಮುಖವಿರುವ ಜಾಹೀರಾತುಗಳು ಇವೆ. ಜೊತೆಗೆ ಸ್ಟಿಕರ್ಗಳು ರಾರಾಜಿಸುತ್ತಿವೆ. ಇದು ಕೂಡ ಚುನಾವಣಾ ನೀತಿ ಸಂಹಿತೆಗೆ ವಿರೋಧವಾಗಿದೆ. ಕೂಡಲೇ ಬಸ್ಗಳ ಮೇಲಿರುವ ಭಾವಚಿತ್ರದ ಬರಹಗಳನ್ನು ತೆಗೆದುಹಾಕಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ, ಪ್ರಮುಖರಾದ ಅರ್ಚನಾ ನಿರಂಜನ್, ಸ್ಟೆಲಾ ಮಾರ್ಟಿನ್, ಕವಿತಾ ರಾಘವೇಂದ್ರ, ಮಧುಕು ಮಾರ್, ಬಾಲಾಜಿ, ವಿನಯ್ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…