ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ; ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರ್ ವಿರುದ್ಧ ದಾಖಲಾಯ್ತು ಕೇಸ್ !

ತೀರ್ಥಹಳ್ಳಿ : ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರ್ ಮೇಲೆ ಕೇಸ್ ದಾಖಲಿಸಲಾಗಿದೆ.

ಏನಿದು ಘಟನೆ ?
ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಾಳೂರು ಶಾಣಾ ಎಎಸ್‌ಐ ಕೃಷ್ಣಮೂರ್ತಿ ರವರಿಗೆ ಹೆದ್ದಾರಿ ಗಸ್ತು ಕರ್ತವ್ಯಕ್ಕೆ ನೇಮಕವಾಗಿದ್ದು ಅದರಂತೆ ಎಎಸ್‌ಐ ರವರು ತಮ್ಮ ಸಿಬ್ಬಂದಿಯವರೊಂದಿಗೆ ಹೆದ್ದಾರಿ ಗಸ್ತು ವಾಹನ KA 14G 1531 ರಲ್ಲಿ ಹೆದ್ದಾರಿ ಗಸ್ತು ನಿರ್ವಹಿಸುತ್ತಿದ್ದು ಇತ್ತೀಚೆಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ (VISIBLE OFFENCE ) ವ್ಯಕ್ತಿಗಳನ್ನು ಹಾಗೂ ಮದ್ಯಪಾನ ಮತ್ತಿತರೆ ಕಾನೂನು ಉಲ್ಲಂಘನೆ ಮಾಡಿದವರ ಬಗ್ಗೆ ಬೆಳಿಗ್ಗೆ 10-30ರ ಸಮಯದಲ್ಲಿ ಬಾಳೇಬೈಲಿನಲ್ಲಿ ಚೆಕ್ ಮಾಡುತ್ತಿದ್ದಾಗ ಒಬ್ಬರಿಗೆ ಸೀಟ್ ಬೆಲ್ಟ್ ಹಾಕದೇ ಇರುವ ಬಗ್ಗೆ ಸ್ಥಳ ದಂಡದ ರಶೀದಿಯನ್ನು ಬರೆಯುತ್ತಿರುವಾಗ ಮತ್ತು ವಾಹನಗಳನ್ನು ಚೆಕ್ ಮಾಡುತ್ತಿದ್ದಾಗ ವಿಜಯಟೈಮ್ಸ್ ಚಾನೆಲ್‌ನ ವಿಜಯಲಕ್ಷ್ಮೀ ಶಿಬರೂರ್ ಮತ್ತು ಅವರ ಕಡೆಯ ನಾಲ್ಕೈದು ಜನರು ಗುಂಪು ಗೂಡಿಕೊಂಡು ಬಂದು ಸರ್ಕಾರಿ ಇಲಾಖಾ ವಾಹನಕ್ಕೆ ಅಡ್ಡಲಾಗಿ ನಿಂತು ವಾಹನ ತಪಾಸಣೆ ಮಾಡದಂತೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಸರ್ಕಾರದಿಂದ ನೀಡಿದ ರಶೀದಿ ಪುಸ್ತಕವನ್ನು ಕಸಿದುಕೊಂಡು ಅವರ ವಿಡಿಯೋಗಳನ್ನು ತೆಗೆದುಕೊಂಡು ಎಎಸ್‌ಐ ರವರಿಗೆ ವಾಹನ ತಪಾಸಣೆ ಮಾಡಲು ಬಿಡದೇ ಅಪಘಾತಗಳನ್ನು ತಡೆಯುವ ತಮ್ಮ ಕರ್ತವ್ಯದಿಂದ ಹಿಮ್ಮೆಟ್ಟಿಸುವ ಸಲುವಾಗಿ ಸರ್ಕಾರಿ ಕೆಲಸ ನಿರ್ವಹಿಸದಂತೆ ಅಡ್ಡಿಪಡಿಸಿ ಪೊಲೀಸರ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಾ ಸಾರ್ವಜನಿಕರಿಗೆ ಪ್ರಚೋದನೆ ನೀಡುವ ರೀತಿಯಲ್ಲಿ ವರ್ತಿಸಿದ ವಿಜಯ ಟೈಮ್ಸ್ ನ್ಯೂಸ್ ಚಾನೆಲ್‌ನ ವಿಜಯಲಕ್ಷ್ಮೀ ಶಿಬರೂರು ಮತ್ತು ಅವರ ಜೊತೆಯಲ್ಲಿದ್ದ ಸಿಬ್ಬಂದಿಯವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

7 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

13 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

22 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago