Categories: Shivamogga

ಕಲ್ಲೂರು ಮೇಘರಾಜ್‌ಗೆ ಸನ್ಮಾನ

ಶಿವಮೊಗ್ಗ : ಕಲ್ಲೂರು ಮೇಘರಾಜ್ (Kalluru Megharaj) ಅವರು ಹಿರಿಯ ಸಾಮಾಜಿಕ ಹೋರಾಟಗಾರರು, ಶಾಲಾ ಭೂಗೇಣಿ ಸಂತ್ರಸ್ತರ ಪರವಾಗಿ ಹೋರಾಟ ಸೇರಿದಂತೆ ಅನೇಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿ ಬರೆಯಲು ಆಗ್ರಹಿಸಿ 1979ರಲ್ಲಿ ಲೋಕಸೇವಾ ಆಯೋಗದ ಕಚೇರಿ ಎದುರು ಹೋರಾಟ ಮಾಡಿದವರಲ್ಲಿ ಮೊದಲಿಗರು ಎಂದು ಖ್ಯಾತ ಹಿರಿಯ ಪತ್ರಕರ್ತ ಅರಸಾಳು ರಂಗನಾಥ್ (Arasalu Ranganath) ಹೇಳಿದರು.

ಅವರು ಇಂದು ನಗರದ ಗಾಂಧಿ ಪಾರ್ಕ್‌ನಲ್ಲಿ ಕಲ್ಲೂರು ಮೇಘರಾಜ್ ಅಭಿಮಾನಿ‌ ಬಳಗದಿಂದ ಹಮ್ಮಿಕೊಂಡಿದ್ದ ಕೆಂಗಲ್ ಹನುಮಂತಯ್ಯ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ ಕಲ್ಲೂರು ಮೇಘರಾಜ್ ಅವರಿಗೆ ಅಭಿನಂದನಾ ಸಮಾರಂಭದಲ್ಲಿ‌ ಶಾಲು ಹೊದಿಸಿ ಸಿಹಿ ಹಂಚಿ ಸನ್ಮಾನಿಸಿ ಬಳಿಕ ಮಾತನಾಡಿದರು.


ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳಾಗಿವೆ. 1956ರಲ್ಲಿ ಕರ್ನಾಟಕ ರಾಜ್ಯ ಉದಯವಾಯಿತು. ಆದರೆ ಅಂದು ಲೋಕಸೇವಾ ಆಯೋಗದ ಪರೀಕ್ಷೆಯನ್ನು ಬೇರೆ ಭಾಷೆಯಲ್ಲಿ ಬರೆಯಬೇಕಿತ್ತು. ಆ ಸಂದರ್ಭದಲ್ಲಿ ದಿಗ್ಗಜ ಸಾಹಿತಿಗಳಾದ ದೇ. ಜವರೇಗೌಡ, ಸಿದ್ದಯ್ಯ ಪುರಾಣಿಕ್, ಪ್ರೊ. ಜಿ. ರಾಮಕೃಷ್ಣ, ಡಾ. ಚಿದಾನಂದಮೂರ್ತಿ ಮುಂತಾದವರೊಂದಿಗೆ ಕನ್ನಡ ಸಂಘರ್ಷ ಸಮಿತಿಯ ಅಂದಿನ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಕಲ್ಲೂರು ಮೇಘರಾಜ್ ಅವರು ಉಪವಾಸ ಸತ್ಯಾಗ್ರಹ ಮಾಡಿ ಕನ್ನಡದಲ್ಲೇ ಪರೀಕ್ಷೆ ಬರೆಯಲು ಆಗ್ರಹಿಸಿದ್ದರು. ಪರಿಣಾಮ ಅಂದಿನ ಮುಖ್ಯಮಂತ್ರಿ ದೇವರಾಜ ಅರಸ್ ಅವರು ತಕ್ಷಣ ರಾಜ್ಯದಲ್ಲಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿ ಬರೆಯಲು ಅವಕಾಶ ಮಾಡಿಕೊಟ್ಟು ಸರ್ಕಾರಿ ಆದೇಶದ ಪ್ರತಿಯನ್ನು ಮುಖ್ಯ ಕಾರ್ಯದರ್ಶಿಗಳ ಮೂಲಕ ಉಪವಾಸ ನಿರತ ಸ್ಥಳಕ್ಕೆ ತಲುಪಿಸಿದ್ದರು. ಇಂದಿಗೆ ಈ ಸತ್ಯಾಗ್ರಹದ 44ನೇ ವರ್ಷದ ನೆನಪಿನ ಹಾಗೂ ಸಾಧನೆಯ ಕಾರ್ಯಕ್ರಮವನ್ನು ಗಾಂಧಿ ಪ್ರತಿಮೆ ಎದುರು ಸಾಂಕೇತಿಕವಾಗಿ ನಡೆಸಿ ಕಲ್ಲೂರು ಮೇಘರಾಜ್‌ರವರಿಗೆ ಸನ್ಮಾನಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ಎಸ್.ಪಿ. ಶೇಷಾದ್ರಿ, ಕೆ.ಟಿ ಗಂಗಾಧರ್, ಎಂ.ಎನ್. ಸುಂದರರಾಜ್, ಟಿ.ಆರ್ ಕೃಷ್ಣಪ್ಪ, ಶೇಖರ ಗೌಳೇರ್, ಶಂಕ್ರಾನಾಯ್ಕ, ರಾಮಚಂದ್ರ, ಪಡವಳ್ಳಿ ಹರ್ಷೇಂದ್ರಕುಮಾರ್, ಮಂಜುನಾಥ ಪಾಟೀಲ್, ಈರಪ್ಪ, ಸುವರ್ಣಾ ನಾಗರಾಜ್, ಜಿ.ವಿ.ಮಂಜುಳಾ, ಪುರದಾಳ್ ನಾಗರಾಜ್, ನರಸಿಂಹ ಮೂರ್ತಿ, ಆದಿಶೇಷ ಮತ್ತಿತರರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago