ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದು, ಆತನಿಂದ ದೊಡ್ಡಪೇಟೆ ಪೊಲೀಸ್ ಠಾಣೆಯ 04, ಸಾಗರ ಟೌನ್ ಪೊಲೀಸ್ ಠಾಣೆಯ 01, ಸಕರಾಯಪಟ್ಟಣ ಪೊಲೀಸ್ ಠಾಣೆಯ 01, ರಾಮನಗರ ಟೌನ್ ಪೊಲೀಸ್ ಠಾಣೆಯ 01, ದಾವಣಗೆರೆಯ 04, ಹೊನ್ನಾಳಿಯ 01, ಭದ್ರಾವತಿಯ 01, ಬೈಸೂರಿನ 01, ತಿಪಟೂರಿನ 01, ಹಾಸನದ 01 ಮತ್ತು ಹರಪನಹಳ್ಳಿಯ 01 ಪ್ರಕರಣ ಸೇರಿದಂತೆ ಒಟ್ಟು 17 ಬೈಕ್ ಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು 10,55,000 ರೂ.ಗಳ ಮೌಲ್ಯದ ಒಟ್ಟು 17 ಬೈಕ್ ಗಳನ್ನು ಅಮಾನತು ಪಡಿಸಿಕೊಳ್ಳಲಾಗಿದೆ.
ಕಳುವಾದ ಬೈಕ್ ಗಳು ಮತ್ತು ಆರೋಪಿಗಳ ಪತ್ತೆಗಾಗಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ, ಪೊಲೀಸ್ ಮತ್ತು ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಇವರ ಮಾರ್ಗದರ್ಶನದಲ್ಲಿ, ಬಾಲರಾಜ್ ಬಿ. ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ರವಿ ಕುಮಾರ್ ಪಿ.ಐ ದೊಡ್ಡಪೇಟೆ ಪೊಲೀಸ್ ಠಾಣೆರವರ ನೇತೃತ್ವದಲ್ಲಿ, ದೊಡ್ಡಪೇಟೆ ಪೊಲೀಸ್ ಠಾಣೆಯ ಶ್ರೀನಿವಾಸ್ ಪಿಎಸ್ಐ , ತಿಮ್ಮಪ್ಪ ಪಿಎಸ್ಐ, ಹೆಚ್.ಸಿ ಪಾಲಾಕ್ಷ ನಾಯ್ಕ್, ಪಿಸಿ ಚಂದ್ರ ನಾಯ್ಕ್ ಪಿ, ಚಂದ್ರಾನಾಯ್ಕ್ ಎಂ, ಹೇಮಂತ್, ಪುನೀತ್, ಮನೋಹರ್, ನಿತಿನ್ ಮತ್ತು ಸುಮಿತ್ರಾ ಬಾಯಿ ರವರುಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.
ಈ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಅಭಿನಂದಿಸಿದ್ದಾರೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…