ರಿಪ್ಪನ್ಪೇಟೆ: ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ ಒತ್ತಡದಲ್ಲಿ ಹಬ್ಬ ಹರಿದಿನಗಳಿಂದ ದೂರವಿರುವ ಪೊಲೀಸರು ಕರ್ತವ್ಯವೇ ದೇವರು ಎನ್ನುವಾಗ ನಾಗರಪಂಚಮಿ ಸಂಪತ್ತು ಶುಕ್ರವಾರ ಮಂಗಳಗೌರಿ ಹಬ್ಬ ಗಣೇಶ ಚತುರ್ಥಿ ಇಂತಹ ಹಬ್ಬಗಳಲ್ಲಿ ಮಹಿಳೆಯರು ತವರು ಮನೆಗೆ ಹೋಗಿ ಅರಿಶಿಣ ಕುಂಕುಮದೊಂದಿಗೆ ಬಾಗಿನ ಪಡೆಯುವುದು ಮುತ್ತೈದೆಯರಿಗೆ ಹಬ್ಬವೋ ಹಬ್ಬ ಆ ಕಾರಣ ಹೊಂಬುಜದ ಗ್ರಾಮ ಪಂಚಾಯ್ತಿ ಸದಸ್ಯೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ಸಹಿತ ಕಳೆದ 11 ವರ್ಷದಿಂದ ಈ ಕಾರ್ಯವನ್ನು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ.
ಯಶಸ್ವತಿ ವೃಷಭರಾಜ್ ಜೈನ್ ಕುಟುಂಬದವರು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮತ್ತು ತೀರ್ಥಹಳ್ಳಿ ಡಿವೈಎಸ್ಪಿ ಹಾಗೂ ಹೊಸನಗರ ವೃತ್ತ ನಿರೀಕ್ಷಕರ ಮತ್ತು ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿನ ಪಿಎಸ್ಐ ಸೇರಿದಂತೆ ಮತ್ತು ಸಿಬ್ಬಂದಿ ವರ್ಗದವರಿಗೆ ರಾಖಿ ಕಟ್ಟಿ ಪರಸ್ಪರ ಹಸ್ತಲಾಘವ ಮಾಡುವುದರೊಂದಿಗೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಅರಿಶಿಣ ಕುಂಕುಮ ತಿಲಕವನ್ನಿಟ್ಟು ಬಾಗಿನದೊಂದಿಗೆ ಉಡಿತುಂಬಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಹುಂಚ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷೆ ಕಾಂತಮಣಿ, ಪ್ರಣಮ್ಯಜೈನ್,
ವೃಷಭರಾಜ್ಜೈನ್, ಪ್ರವೀಣ ಮಂಡಕ ಹಾಜರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…