ಕಳೆದ 3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಕಾಡಿನಲ್ಲಿ ಪತ್ತೆ !
ತೀರ್ಥಹಳ್ಳಿ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಶವ ಡಿ.31ರಂದು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ. ತಾಲೂಕಿನ ಕಣಿವೆ ಎಂಬಲ್ಲಿ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪ್ರಕರಣ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ತೀರ್ಥಹಳ್ಳಿ ತಾಲೂಕು ಕೂಡಿಗೆ ಗೋಪಾಲ್ ಮೃತ ವ್ಯಕ್ತಿ. ಹಲವು ವರ್ಷಗಳ ಕಾಲ ಬಾಂಬೆಯಲ್ಲಿದ್ದು ಬಳಿಕ ಜಮೀನು ಮಾಡಿಕೊಂಡು ಊರಲ್ಲಿದ್ದರು.
3 ತಿಂಗಳ ಹಿಂದೆ ನಾಪತ್ತೆ
ಹೆಂಡತಿ ಮನೆಗೆ ಮಹಾಲಯ ಹಬ್ಬಕ್ಕೆಂದು ಗೋಪಾಲ ಹೋಗಿದ್ದು, ನಂತರ ನಾಪತ್ತೆಯಾಗಿದ್ದರು. ಅವರಿಗಾಗಿ ಹುಡುಕಾಟ ನಡೆಸಿದ್ದು ಸುಳಿವು ಪತ್ತೆಯಾಗಿರಲಿಲ್ಲ. ಎನ್.ಆರ್.ಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇದೀಗ ಡಿ.31ರಂದು ಅವರ ಶವ ಕಣಿವೆ ಕಾಡಿನಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.