ಕಷ್ಟಗಳನ್ನು ಅರಗಿಸಿಕೊಂಡು ಪರಿಪಕ್ವವಾದವರು ಆರ್.ಎಂ.ಎಂ ; ಆಯನೂರು ಮಂಜುನಾಥ್

ತೀರ್ಥಹಳ್ಳಿ : ಕಷ್ಟಗಳನ್ನು ಅರಗಿಸಿಕೊಂಡು ಪರಿಪಕ್ವವಾದವರು ಆರ್.ಎಂ ಮಂಜುನಾಥ ಗೌಡರು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.


ಅವರು ಇಂದು ತೀರ್ಥಹಳ್ಳಿಯಲ್ಲಿ ಸಹಕಾರಿ ವೇದಿಕೆ ವತಿಯಿಂದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್.ಎಂ. ಮಂಜುನಾಥ ಗೌಡರಿಗೆ ಹಮ್ಮಿಕೊಳ್ಳಲಾಗಿದ್ದ ತೌರೂರ ಸಂಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಆರ್.ಎಂ. ಮಂಜುನಾಥ ಗೌಡರು ಒಬ್ಬ ಧೀಮಂತ ನಾಯಕರು. ಸಹಕಾರ ಕ್ಷೇತ್ರದ ಧ್ರುವತಾರೆಯಾಗಿದ್ದವರು. ಇನ್ನೇನು ಸಹಕಾರ ಕ್ಷೇತ್ರದಲ್ಲಿ ಅವರ ಅಧ್ಯಾಯ ಮುಗಿದೇ ಹೋಯಿತು ಎನ್ನುವ ಹಂತದಿಂದ ಮೇಲೆ ಎದ್ದು ಬಂದವರು. ಸವಾಲುಗಳನ್ನು ಸ್ವೀಕರಿಸಿದವರು. ಕಷ್ಟಗಳನ್ನು ಅರಗಿಸಿಕೊಂಡು ಸಹಕಾರ ಕ್ಷೇತ್ರದಲ್ಲಿ ಬೆಳಕು ಮೂಡಿಸಿದವರು.


ತೀರ್ಥಹಳ್ಳಿ ಹೇಳಿಕೇಳಿ ಬುದ್ಧಿವಂತರ ರಾಜಕೀಯ ಕ್ಷೇತ್ರ. ಅಂತಹ ಕ್ಷೇತ್ರದಲ್ಲಿ ವರ್ಣರಂಜಿತ ರಾಜಕಾರಣಿಯಾಗಿ ಕಾಣಿಸಿಕೊಂಡವರು ಎಂದರು.
ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಆರ್.ಎಂ. ಮಂಜುನಾಥ ಗೌಡರನ್ನು ಸಹಕಾರ ಕ್ಷೇತ್ರದಿಂದಲೇ ಮುಗಿಸಿಬಿಡಬೇಕು ಎಂಬ ಹುನ್ನಾರಗಳೆಲ್ಲ ಈಗ ಮುಗಿದು ಹೋಗಿವೆ. ಅವರು ಮತ್ತಷ್ಟು ಗಟ್ಟಿಯಾಗಿದ್ದಾರೆ. ಸಹಕಾರ ಕ್ಷೇತ್ರವನ್ನು ದಶಕಗಳ ಕಾಲ ಕಟ್ಟಿ ಬೆಳೆಸಿ ರೈತರ, ಬಡವರ ಪರವಾಗಿ ನಿಂತವರು. ಖಾಸಗಿ ಸಂಸ್ಥೆಗಳ ಕಪಿಮುಷ್ಟಿಗೆ ಸಿಲುಕಿ ನಲುಗುತ್ತಿದ್ದ ರೈತರನ್ನು ಸಹಕಾರ ಕ್ಷೇತ್ರದ ಮೂಲಕ ಉಳಿಸಿಕೊಂಡವರು. ಅವರನ್ನು ಸಹಕಾರ ಕ್ಷೇತ್ರದಿಂದ ಓಡಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರಿಗೆ ಉತ್ತಮ ರಾಜಕೀಯ ಭವಿಷ್ಯವಿದೆ. ಅವರಿಗೆ ತವರೂರಲ್ಲಿ ಸನ್ಮಾನಿಸುತ್ತಿರುವುದು ಅತ್ಯಂತ ಖುಷಿ ತಂದಿದೆ ಎಂದರು.


ಕಾರ್ಯಕ್ರಮದಲ್ಲಿ ಆರ್.ಎಂ. ಮಂಜುನಾಥ ಗೌಡ ಅವರನ್ನು ಸನ್ಮಾನಿಸಲಾಯಿತು. ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಹಿರಿಯ ಸಹಕಾರಿ ವಿಜಯದೇವ್, ತಾ.ಪಂ. ಅಧ್ಯಕ್ಷೆ ಗೀತಾ, ಕಲಗೋಡು ರತ್ನಾಕರ್, ಶ್ರೀಪಾದ್ ಹೆಗಡೆ, ನಾರಾಯಣ ರಾವ್, ಷಡಾಕ್ಷರಿ, ವೈ.ಹೆಚ್. ನಾಗರಾಜ್, ಶಂಕರಘಟ್ಟ ರಮೇಶ್, ಮುಡುಬ ರಾಘವೇಂದ್ರ, ಪಿ.ಒ. ಶಿವಕುಮಾರ್, ಮೋಹನ್, ದುಗ್ಗಪ್ಪ ಗೌಡ, ಜೆ.ಪಿ.ಯೋಗೀಶ್, ರಾಜಣ್ಣ ರೆಡ್ಡಿ ಸೇರಿದಂತೆ ಹಲವರಿದ್ದರು.

Malnad Times

Recent Posts

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

4 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

6 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

19 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

21 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

22 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

22 hours ago