Categories: Shivamogga

ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಏಕೆ ಬೀಳಿಸಬಾರದು ಇದರಲ್ಲಿ ತಪ್ಪೇನಿದೆ ; ಕೆಎಸ್ಈ

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಏಕೆ ಬೀಳಿಸಬಾರದು, ಇದರಲ್ಲಿ ತಪ್ಪೇನಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕುಟುಕಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರವಾಗಿದೆ ಜನಪರವಾಗಿ ಕೆಲಸ ಮಾಡುತ್ತಿಲ್ಲ. ಭ್ರಷ್ಟಾಚಾರ ತಲೆ ಎತ್ತಿದೆ. ವಿದ್ಯುತ್ ಕೊರತೆ ತಲೆದೋರಿದೆ. ರೈತರು, ಕಾರ್ಮಿಕರು ನಿರಾಶರಾಗಿದ್ದಾರೆ. ಹಣ ಕೊಟ್ಟರೂ ವಿದ್ಯುತ್ ಇಲ್ಲ, ಇನ್ನು ಉಚಿತ ಭಾಗ್ಯ ಎಲ್ಲಿಂದ ಬಂತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ಖರೀದಿ ಮಾಡಬೇಕಿತ್ತು. ರಾಜ್ಯದ ಅಭಿವೃದ್ಧಿ ಮೊದಲೇ ಇಲ್ಲ. ಇಂತಹ ಸರ್ಕಾರವನ್ನು ಇನ್ನೂ ಉಳಿಸಬೇಕೆ ಎಂದು ಪ್ರಶ್ನೆ ಮಾಡಿದರು.


ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಸಾಮ್ರಾಜ್ಯವೇ ಇಲ್ಲಿದೆ. ಅದರಲ್ಲೂ ಡಿ.ಕೆ. ಶಿವಕುಮಾರ್ ಅಕ್ರಮ ಹಣ ಸಂಪಾದನೆ ಮಾಡಿದ್ದಾರೆ ಎಂದು ಇಡೀ ದೇಶಕ್ಕೆ ಗೊತ್ತಿದೆ. ಜೈಲಿನಲ್ಲಿದ್ದು ಬೇಲ್ ಮೇಲೆ ಹೊರಗೆ ಬಂದವರು. ಕೇಸ್ ನಡೆಯುತ್ತಾ ಇದೆ, ಅವರ ಮೇಲಿನ ವಿಚಾರಣೆ ಮತ್ತೆ ಮುಂದುವರಿದಿದೆ. ಅವನೇನು ಸತ್ಯ ಹರಿಶ್ಚಂದ್ರ ಅಲ್ಲ. ಮತ್ತೆ ಜೈಲಿಗೆ ಹೋಗಿಯೇ ಹೋಗುತ್ತಾನೆ ಎಂದರು.


ಬಿಜೆಪಿ ಎಲ್ಲಾ ಭ್ರಷ್ಟಾಚಾರವನ್ನು ಸಹಿಸಿಕೊಂಡು ಸುಮ್ಮನಿರುವ ವಿರೋಧ ಪಕ್ಷವಲ್ಲ. ಇತ್ತೀಚೆಗೆ ಇಡಿ ದಾಳಿಯಲ್ಲಿ ಎರಡು ಕಡೆ ಕೋಟ್ಯಂತರ ರೂ. ನಗದು ಸಿಕ್ಕಿದೆ. ಇದು ಎಲ್ಲಿಂದ ಬಂತು ಎಂದು ಕೇಳಬಾರದೆ. ನಮಗೆ ಅನುಮಾನ ಇದೆ. ಈ ಹಣ ಪಂಚರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಬಳಕೆ ಮಾಡಲು ಸಂಗ್ರಹಿಸಿತ್ತು ಎಂದು ನಾವು ಆರೋಪ ಮಾಡುತ್ತೇವೆ. ಇವರು ಸತ್ಯವಂತರಾದರೆ ಆಯಿತು ಹಣ ಸಿಕ್ಕಿದೆ. ನಾವು ಸಿಬಿಐ ತನಿಖೆ ಮಾಡಿಸುತ್ತೇವೆ ಎಂದು ಏಕೆ ಹೇಳುತ್ತಿಲ್ಲ. ಹಾಗಾದರೆ ನಮ್ಮ ಅನುಮಾನ ನಿಜವಲ್ಲವೇ. ಇಂತಹ ಸರ್ಕಾರ ನಮಗೆ ಬೇಕಾ. ನಾವು ನೇರವಾಗಿ ಹೇಳುತ್ತೇವೆ. ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದರು.


ತಲೆ ಕೆಟ್ಟವನಿಗೆ ಉತ್ತರ ಕೊಡಲ್ಲ
ಬಿಜೆಪಿಯಿಂದ ಕಾಂಗ್ರೆಸ್‌ಗೆ ಹಲವರು ಸೇರುತ್ತಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಕೆಂಡಾಮಂಡಲವಾದ ಈಶ್ವರಪ್ಪ ಆ ತಲೆ ಕೆಟ್ಟವನ ಮಾತಿಗೆ ನಾನು ಉತ್ತರ ಕೊಡಲ್ಲ. ಅವನಿಗೆ ಯಾವ ನೈತಿಕತೆಯೂ ಇಲ್ಲ. ಎಷ್ಟು ಪಕ್ಷಗಳನ್ನು ಬದಲಾವಣೆ ಮಾಡಿದ್ದಾನೆ ಎಂದು ಅವನೇ ಹೇಳಲಿ ಎಂದು ಏಕವಚನದಲ್ಲಿಯೇ ಜಾಡಿಸಿದರು.
ರೇಣುಕಾಚಾರ್ಯ ಕೂಡ ಬಿಜೆಪಿ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂಬ ಪ್ರಶ್ನೆಗೂ ಅದೇ ಉತ್ತರ ನೀಡಿದ ಅವರು, ಈಗಾಗಲೇ ರೇಣುಕಾಚಾರ್ಯ ಅವರಿಗೆ ನೋಟೀಸ್ ನೀಡಿದೆ. ನೋಟೀಸ್ ಪಡೆದುಕೊಂಡವರ ಮಾತಿಗೆ ನಾನು ಉತ್ತರ ಕೊಡುವುದಿಲ್ಲ ಎಂದರು.
ಈ ಹಿಂದಿನ ಪತ್ರಿಕಾಗೋಷ್ಠಿಯಲ್ಲೂ ಈಶ್ವರಪ್ಪ ಆಯನೂರು ವಿರುದ್ಧ ಮಾತನಾಡಿದ್ದರು. ಆಯನೂರು ಮಂಜುನಾಥ್ ನಿಮ್ಮ ಬಗ್ಗೆ ಮಾತನಾಡಿದ್ದಾರೆ ಎಂದು ಪತ್ರಕರ್ತರೊಬ್ಬರು ಪ್ರಶ್ನೆ ಮಾಡುತ್ತಿದ್ದ ಹಾಗೆಯೇ ಅವನಿಗಂತೂ ಬುದ್ಧಿ ಇಲ್ಲ. ನಿಮಗೂ ಬುದ್ಧಿ ಇಲ್ಲವೇ ಎಂದು ಮರು ಪ್ರಶ್ನೆ ಮಾಡಿದರು.


ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ನಗರಾಧ್ಯಕ್ಷ ಜಗದೀಶ್, ಪಾಲಿಕೆ ಸದಸ್ಯ ಜ್ಞಾನೇಶ್ವರ್, ಬಾಲು, ಶಶಿಧರ್, ಅಣ್ಣಪ್ಪ ಕೆ.ವಿ. ಇದ್ದರು.

Malnad Times

Recent Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

3 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

14 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

20 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 days ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

2 days ago