ಕಾನು ಅರಣ್ಯ ಉಳಿಸಲು ಅಗತ್ಯ ಕ್ರಮವಹಿಸಿ ; ವೃಕ್ಷಲಕ್ಷ ಆಂದೋಲನದಿಂದ ತಹಸೀಲ್ದಾರ್‌ಗೆ ಮನವಿ

ಹೊಸನಗರ : ತಾಲೂಕಿನ ನಗರ ಹೋಬಳಿಯ ಕಟ್ಟೆಕೊಪ್ಪದ ಕಂದಾಯ ಭೂಮಿಯ ಅರಣ್ಯ ಖಾಸಗಿಯವರ ಪಾಲಾಗದಂತೆ ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಒತ್ತಾಯಿಸಿದ್ದಾರೆ.

ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದ ಅವರು, ನಾಲ್ಕಾಣೆ ಕಾನು, ಒಂದಾಣೆ ಕಾನು ಎಂದು ಸ್ವಾತಂತ್ರ್ಯ ಪೂರ್ವದಲ್ಲಿ ಕೆಲವರಿಗೆ ಬಿಡಲಾಗಿತ್ತು. ಆದರೆ ಅದನ್ನೇ ಇಂದು ಹಕ್ಕು ಚಲಾಯಿಸಲು ಹೊರಟಿದ್ದಾರೆ. ನೂರಾರು ಎಕರೆ ಭೂಪ್ರದೇಶ ಹೇಗೆ ಏಕವ್ಯಕ್ತಿಗೆ ಮಂಜೂರು ಮಾಡಲು ಸಾಧ್ಯ. ಎಲ್ಲಕ್ಕಿಂತ ಹೆಚ್ಚಾಗಿ ಪಶ್ಚಿಮಘಟ್ಟದ ದಟ್ಟ ಕಾಡು ಇರುವ ಜಾಗವಾಗಿದ್ದು, ಇದನ್ನೇ ಖಾಸಗಿ ವ್ಯಕ್ತಿಗಳಿಗೆ ಪಹಣೆ ಮಾಡಲಾಗಿದೆ. ನಗರ ಹೋಬಳಿಯ ಕಟ್ಟೆಕೊಪ್ಪದಲ್ಲಿ ಸುಮಾರು 250 ಎಕರೆ ಜಾಗದ ಕುರಿತು ಈಗಾಗಲೇ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿದೆ. ಕೋರ್ಟ್ ಸಹಾ ಖಾತೆದಾರರ ಪರವಾದ ಆದೇಶ ನೀಡಿದೆ. ಇದೇ ಗ್ರಾಮದ ಸಮೀಪದಲ್ಲಿ ಇಂತಹದೇ ಇನ್ನೂ ಕೆಲವು ಪ್ರಕರಣಗಳಿವೆ. ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳು ವಸ್ತುಸ್ಥಿತಿಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು. ಅರಣ್ಯ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ತಹಸೀಲ್ದಾರ್ ರಶ್ಮಿ ಹಾಲೇಶ್, ಕಾನೂನಿನ ಪರಿಧಿಯಲ್ಲಿ ತಾವು ಕೆಲಸ ಮಾಡಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಈ ವೇಳೆ ಆಂದೋಲನದ ಪ್ರಮುಖರಾದ ಕವಲಕೋಡು ವೆಂಕಟೇಶ್, ಶ್ರೀಪಾದ ಬಿಚ್ಚುಗತ್ತಿ, ಹನಿಯ ರವಿ, ಚಕ್ರವಾಕ ಸುಬ್ರಮಣ್ಯ, ಸಂಪೆಕಟ್ಟೆ ಕುಮಾರ್ ಮತ್ತಿತರರು ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 hour ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

5 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

6 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

8 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

8 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

15 hours ago