ಶಿವಮೊಗ್ಗ : ಜಿಲ್ಲೆಯು ಸಾಹಿತ್ಯ, ಸಂಸ್ಕೃತಿ, ಕಲೆ, ಪ್ರಕೃತಿ ಸೌಂದರ್ಯ ಮತ್ತು ಸಾಮರಸ್ಯಕ್ಕೆ ಹೆಸರಾಗಿದೆ. ಜಿಲ್ಲೆಯಲ್ಲಿ ಎಲ್ಲ ವರ್ಗದವರು ಶಾಂತಿಯಿಂದ ಸಹಬಾಳ್ವೆ ನಡೆಸುತ್ತಿದ್ದಾರೆ. ಅದರಂತೆ ಮೊನ್ನೆ ಹಿಂದೂ ಮಹಾಸಭಾದ ಗಣಪತಿ ವಿಸರ್ಜನಾ ಕಾರ್ಯಕ್ರಮ ಶಾಂತಿಯುತವಾಗಿ ನೆರವೇರಿದೆ. ಆದರೆ ಈದ್ ಮಿಲಾದ್ ಹಬ್ಬದ ದಿನದಂದು ಅಹಿತಕರ ಘಟನೆ ನಡೆದಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಯಾವುದೇ ವಿಚಾರವಾಗಿ ಯಾರೇ ವ್ಯಕ್ತಿಗಳು ಕಾನೂನು ಭಂಗ ಮಾಡುವುದಾಗಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವನ್ನುಂಟು ಮಾಡುವುದಾಗಲಿ, ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲಿ ಖಂಡನೀಯವಾಗಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಸಾರ್ವಜನಿಕರು ಶಾಂತಿಯಿಂದಲೇ ಉತ್ತರಿಸಬೇಕು. ಕಿಡಿಗೇಡಿಗಳನ್ನು ಹಿಡಿದು ಕಾನೂನಿನ ಸುಪರ್ದಿಗೆ ಒಪ್ಪಿಸಬೇಕು. ಶಾಂತಿ ಭಂಗಮಾಡುವ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ, ಕಾನೂನನ್ನು ಮುರಿಯುವಂತಹ ಯಾವುದೇ ವ್ಯಕ್ತಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು.
ನಮ್ಮ ಜಿಲ್ಲೆಯಲ್ಲಿ ಇಂತಹ ಯಾವುದೇ ಕೃತ್ಯಕ್ಕೆ ಅವಕಾಶವಿರುವುದಿಲ್ಲ. ಜನರು ಶಾಂತಿ ಕಾಪಾಡಬೇಕು ಪರಸ್ಪರ ನಂಬಿಕೆ ಬೆಳೆಸಿಕೊಳ್ಳಬೇಕು ನಮ್ಮ ಸರ್ಕಾರದ ಅವಧಿಯಲ್ಲಿ ಇಂತಹ ಯಾವುದೇ ಘಟನೆ ನಡೆಯಲು ಅವಕಾಶ ನೀಡುವುದಿಲ್ಲ. ಯಾವುದೇ ಸಾರ್ವಜನಿಕ ಆಸ್ತಿಯನ್ನು ಭಂಗ ಮಾಡಿದವರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಜನರು ಸಹಕರಿಸಿ ಎಂದಿನಂತೆ ಸಹಬಾಳ್ವೆ ನಡೆಸಲು ಕೋರುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…