ಹೊಸನಗರ ; ಬಿರುಕುಬಿಟ್ಟ ಗೋಡೆಗಳು, ಈಗಲೋ ಆಗಲೋ ಧರಾಶಾಯಿ ಆಗಲಿರುವಂತ ಮೇಲ್ಛಾವಣಿ, ಒಡೆದು ಹಲವು ಚೂರುಗಳಾಗಿರುವ ಕಟ್ಟಡ ಮುಂಬಾಗಿಲು, ಮಕ್ಕಳು ಕುಳಿತಲ್ಲಿಯೇ ಸೀಳಿ ಹೋಗುತ್ತಿರುವ ನೆಲದ ಹಾಸು. ಈ ಎಲ್ಲಾ ದೃಶ್ಯಗಳನ್ನು ಒಟ್ಟಾಗಿ ನೀವು ನೋಡಲೇಬೇಕು ಎಂತಾದರೆ ಹೊಸನಗರ ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಸವೆ ಗ್ರಾಮದ ಸರ್ಕಾರಿ ಅಂಗನವಾಡಿ ಕೇಂದ್ರದ ಕಟ್ಟಡಕ್ಕೆ ಭೇಟಿ ನೀಡಲೇಬೇಕು.
2010-11ನೇ ಸಾಲಿನ 12 ಮತ್ತು 13ನೇ ಹಣಕಾಸು ಸಾಲಿನಲ್ಲಿ ರೂ ಮೂರು ಲಕ್ಷ ಅನುದಾನದಲ್ಲಿ ಈ ಅಂಗನವಾಡಿ ಕಟ್ಟಡ ನಿರ್ಮಾಣ ಆಗಿತ್ತು. ಈ ಭಾಗದ ಹಲವು ಗ್ರಾಮಗಳ ಮಕ್ಕಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಈ ಅಂಗನವಾಡಿ ಕೇಂದ್ರಕ್ಕೆ ಮೊರೆ ಹೋಗಿದ್ದರು. ಕಳೆದ ಎರಡು ವರ್ಷಗಳ ಈಚೆಗೆ ಕಟ್ಟಡದಲ್ಲಿ ವ್ಯಾಪಕ ಬದಲಾವಣೆ ಕಂಡು ಬಂದು ರಿಪೇರಿ ಕಾರ್ಯಕ್ಕೆ ಮುಂದಾಗುವಂತೆ ಹಲವು ಬಾರಿ ಸಿಡಿಪಿಓ ಕಚೇರಿಗೆ ಗ್ರಾಮಸ್ಥರೇ ಮನವಿ ಸಲ್ಲಿಸಿದ್ದರು. ಆದರೂ ಈವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ಗ್ರಾಮ ಪಂಚಾಯತಿ ಆಡಳಿತ ಸಹ ಕಟ್ಟಡ ದುರಸ್ತಿಗೆ ಸಂಬಂಧಪಟ್ಟಂತೆ ಇಲಾಖೆಗೆ ಪತ್ರ ಬರೆದು ಹಲವು ತಿಂಗಳೇ ಕಳೆದಿದೆ.
ಪ್ರಸಕ್ತ ಈ ಅಂಗನವಾಡಿಯು ಪಕ್ಕಲ ಸರ್ಕಾರಿ ಶಾಲೆಯ ನಲಿ-ಕಲಿ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದ ನಾಲ್ಕೈದು ಮಕ್ಕಳು ವ್ಯಾಸಂಗ ನಿರತರಾಗಿದ್ದಾರೆ. ಹಳೇ ಅಂಗನವಾಡಿ ಕಟ್ಟಡವು ಶಿಥಿಲಾವಸ್ಥೆ ತಲುಪಿರುವ ಕಾರಣ ಪೋಷಕರು ತಮ್ಮ ಮಕ್ಕಳ ಸುರಕ್ಷತೆ ಕುರಿತಂತೆ ಆತಂಕದಲ್ಲಿ ದಿನದೂಡುತ್ತಿದ್ದಾರೆ. ಮಕ್ಕಳ ಶುಚಿತ್ವಕ್ಕೆ ಆಗತ್ಯವಾದ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಸಂಪೂರ್ಣ ಕಟ್ಟಡ ದುರಸ್ತಿಗೆ ಇಲಾಖೆ ಮುಂದಾಗಬೇಕು. ಜನಪ್ರತಿನಿಧಿಗಳು ಕೂಡಲೇ ಇತ್ತ ಗಮನ ಹರಿಸಿ ಅಗತ್ಯ ಕ್ರಮಕೈಗೊಳ್ಳಬೇಕು ಎಂಬುದು ಗ್ರಾಮಸ್ಥರ ಒಕ್ಕೊರಳಿನ ದನಿಯಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…