ಕಾರಿಗೆ ಬೆಂಕಿ ಹಚ್ಚಿ ಶಿವಮೊಗ್ಗದ ಯುವಕನ ಭೀಕರ ಹತ್ಯೆ !

ಶಿಕಾರಿಪುರ : ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದ್ದು, ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಘಟನೆ ನಡೆದಿದ್ದು, ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಎಂಬ ಯುವಕನೇ ಭೀಕರವಾಗಿ ಹತ್ಯೆಗೀಡಾದ ಯುವಕ ಎಂದು ಹೇಳಲಾಗಿದೆ.

ಆತ ಕೊಂಡೊಯ್ದ ಇನ್ನೋವಾ ಕಾರಿನ ಡಿಕ್ಕಿಯಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹವು ಸಂಪೂರ್ಣ ಸುಟ್ಟು ಕರಕಲಾಗಿದೆ.

ರಾತ್ರಿ ಗಾಡಿಕೊಪ್ಪದ ಮನೆಯಲ್ಲಿದ್ದ ಯುವಕನಿಗೆ, ಕೆಲ ಪರಿಚಿತರು ಆತನ ಮೊಬೈಲ್ ಫೋನ್‌ಗೆ ಕರೆ ಮಾಡಿದ್ದರು. ಸ್ನೇಹಿತರೋರ್ವರ ಇನ್ನೋವಾ ಕಾರಿನಲ್ಲಿ ವೀರೇಶ್ ತೆರಳಿದ್ದರು. ನಂತರ ಮನೆಗೆ ಹಿಂದಿರುಗಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಶಿಕಾರಿಪುರ ಡಿವೈಎಸ್‌ಪಿ ಕೇಶವ್, ಇನ್ಸ್‌ಪೆಕ್ಟರ್ ರುದ್ರೇಶ್, ಶಿರಾಳಕೊಪ್ಪ ಠಾಣೆ ಸಬ್ ಇನ್ಸ್‌ಪೆಕ್ಟರ್ ರಮೇಶ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

Malnad Times

Recent Posts

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 hour ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

12 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

12 hours ago