ಕಾಲುಜಾರಿ ನೀರಿನ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು !
ಸೊರಬ: ನೀರಿನ ಹೊಂಡಕ್ಕೆ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಬಿದರಗೇರಿ ಗ್ರಾಮದಲ್ಲಿ ನಡೆದಿದೆ.
ಬಿದರಗೇರಿ ಗ್ರಾಮದ ಮಂಜಪ್ಪ (45) ಮೃತ ವ್ಯಕ್ತಿ. ಮೂರ್ಛೆ ರೋಗದಿಂದ ಬಳಲುತ್ತಿದ್ದ ಅವರು ಕೈ-ಕಾಲು ತೊಳೆಯಲೆಂದು ನೀರಿನ ಹೊಂಡದ ಬಳಿ ತೆರಳಿದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಎರಡ್ಮೂರು ತಾಸು ಕಾರ್ಯಾಚರಣೆ ನಡೆಸುವ ಮೂಲಕ ಮೃತ ದೇಹವನ್ನು ಹೊರ ತೆಗೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಅಗ್ನಿ ಶಾಮಕ ದಳದ ಠಾಣಾಧಿಕಾರಿ ಮಹಾಬಲೇಶ್ವರ ನಾಯ್ಕ್, ಅಗ್ನಿ ಶಾಮಕರಾದ ಮಹೇಶ್ ಮಡಿವಾಳ, ಕೆ.ಎನ್. ಪ್ರಶಾಂತ್, ಸಂದೀಪ್ ರಾಥೋಡ್, ಸಂತೋಷ ನೇಸರಗಿ ಪಾಲ್ಗೊಂಡಿದ್ದರು. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.