Categories: HosanagaraShivamogga

ಕಾಲೇಜು ಅಭಿವೃದ್ಧಿಗೆ ಬದ್ಧ ; ಕೊಡಚಾದ್ರಿ ಕಾಲೇಜು ಸಿಡಿಸಿ ಸಭೆಯಲ್ಲಿ ಶಾಸಕ ಬೇಳೂರು ಹೇಳಿಕೆ

ಹೊಸನಗರ: 4.50 ಕೋಟಿ ರೂ. ವೆಚ್ಚದಲ್ಲಿ ಹೊಸನಗರದ (Hosanagara) ಕೊಡಚಾದ್ರಿ (Kodachadri College) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅಗತ್ಯವಿರುವ ಕಂಪ್ಯೂಟರ್ ಲ್ಯಾಬ್, ಆಡಿಟೋರಿಯಂ, ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ (Beluru Gopalakrishna) ಹೇಳಿದರು.

ಅವರು ಕಾಲೇಜಿನಲ್ಲಿ ಸೋಮವಾರ ನಡೆದ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರವು ಶೈಕ್ಷಣಿಕ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬದ್ಧತೆ ಹೊಂದಿದೆ. ಕಾಲೇಜಿಗೆ ಅಗತ್ಯವಿರುವ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಸರಕಾರ ಆಧ್ಯತೆಯ ಮೇರೆಗೆ ಅನುದಾನ ಬಿಡುಗಡೆ ಮಾಡಲಿದೆ. ಆದರೆ ಎಲ್ಲವನ್ನೂ ಏಕಕಾಲದಲ್ಲಿ ಮಾಡಲು ಸಾಧ್ಯವಿಲ್ಲ. ದಾನಿಗಳು, ಶಿಕ್ಷಣಾಸಕ್ತರ ಸಹಕಾರ ಪಡೆಯಿರಿ ಎಂದು ಸಲಹೆ ನೀಡಿದರು.

ಕಾಲೇಜಿನಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ. ಶೌಚಾಲಯ, ಗ್ರಂಥಾಲಯ ನಿರ್ವಹಣೆಗೆ ಮೊದಲ ಮಹತ್ವ ನೀಡಿ. ಉಪನ್ಯಾಸಕರು ವಿದ್ಯಾರ್ಥಿಗಳ ಕುರಿತು ಕಾಳಜಿ ಹೊಂದಿ ಶ್ರಮ ವಹಿಸಿ ಕರ್ತವ್ಯ ನಿರ್ವಹಿಸಿ ಎಂದು ಉಪನ್ಯಾಸಕರ ವರ್ಗಕ್ಕೆ ಸೂಚಿಸಿದರು.

ಕಾಲೇಜಿಗೆ ಬಿಎಸ್ಸಿ ಹಾಗೂ ಎಂ.ಕಾಂ. ಕೋರ್ಸ್‌ಗಳ ಅಗತ್ಯವಿದೆ. ಇಲ್ಲಿನ ವಿದ್ಯಾರ್ಥಿಗಳು ದೂರದ ಊರುಗಳಿಗೆ ಹೋಗಾಬೇಕಾಗಿದೆ. ಕಾಲೇಜಿನ ಮಕ್ಕಳಿಗೆ ಅನುಕೂಲವಾಗುವಂತೆ ಕ್ಯಾಂಟೀನ್ ಹಾಗೂ ಬೈಕ್ ಸ್ಟಾಂಡ್‌ ಅಗತ್ಯವಿದೆ. ಬ್ಯಾಕೋಡು, ತುಮರಿ, ನಿಟ್ಟೂರಿನಿಂದ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಆದರೆ ಅವರಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆಯಿಲ್ಲ ಎಂದು ಉಪನ್ಯಾಸಕ ವರ್ಗ ಶಾಸಕರಿಗೆ ಮನವಿ ಮಾಡಿದ್ದು ಒಂದೆರಡು ತಿಂಗಳಲ್ಲಿ ಸರ್ಕಾರಿ ಬಸ್ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

ಪ್ರಾಂಶುಪಾಲ ಡಾ.ಉಮೇಶ್, ಸಮಿತಿಯ ಲೆಕ್ಕಪತ್ರಗಳನ್ನು ಸಭೆಗೆ ಮಂಡಿಸಿದರು.
ಸಭೆಯಲ್ಲಿ ಹಿರಿಯರಾದ ಶ್ರೀನಿವಾಸ ಕಾಮತ್, ಅಂಜನ್ ಟೆಕ್ಸ್ ಟೈಲ್ಸ್ ರಾಜಮೂರ್ತಿ, ನಿವೃತ್ತ ಶಿಕ್ಷಕರಾದ ರಾಜಶೇಖರಗೌಡ, ಗ್ರಾಮ ಪಂಚಾಯತಿ ಸದಸ್ಯ ಮಹೇಂದ್ರ, ಹಿಟಾಚಿ ಶ್ರೀಧರ, ಸುಬ್ರಹ್ಮಣ್ಯ, ಬೃಂದಾವನ ಪ್ರವೀಣ್, ಸುದೀಪ, ಅಣ್ಣಪ್ಪ, ಲೋಕೇಶ್ವರ, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಕವಿತಾ, ಕೋಮಲ, ಗ್ರಂಥಪಾಲಕ ಲೋಕೇಶ್ ಮತ್ತಿತರರು ಇದ್ದರು.

ಅತಿಥಿ ಉಪನ್ಯಾಸಕರ ಮನವಿ:
ಅತಿಥಿ ಉಪನ್ಯಾಸಕರ ಸೇವಾ ಭದ್ರತೆಯೊಂದಿಗೆ ಖಾಯಂಗೊಳಿಸುವ ಆಶ್ವಾಸನೆಯನ್ನು ಸರ್ಕಾರ ನೀಡಿದ್ದು, ಇದಕ್ಕೆ ಸಂಬಂಧಪಟ್ಟಂತೆ 2023-24ರ ಯುಜಿಸಿ ನಿಯಮಾವಳಿ ಅನುಸಾರ ಅರ್ಹತೆ ಮತ್ತು ಸೇವಾ ಹಿರಿತನದ ಆಧಾರದ ಮೇಲೆ ಅತಿಥಿ ಉಪನ್ಯಾಸಕರುಗಳ ವಯೋಮಿತಿ ಮೀರುತ್ತಿದೆ. ಭರವಸೆ ಈಡೇರದ ಈ ಕಾರಣಕ್ಕೆ ರಾಜ್ಯಾದ್ಯಂತ ಉಪನ್ಯಾಸಕರು ಅನಿರ್ದಿಷ್ಠ ಅವಧಿ ಹೋರಾಟಕ್ಕೆ ಕರೆ ನೀಡಿದ್ದು, ಈ ಹೋರಾಟಕ್ಕೆ ನಮ್ಮೊಂದಿಗೆ ಧ್ವನಿಯಾಗಿ ಸರ್ಕಾರದ ಗಮನ ಸೆಳೆದು ಬೆಂಬಲ ಸೂಚಿಸಬೇಕು ಎಂದು ಕಾಲೇಜಿನ ಅತಿಥಿ ಉಪನ್ಯಾಸಕರು ಶಾಸಕ ಗೋಪಾಲಕೃಷ್ಣ ಅವರಿಗೆ ಈ ವೇಳೆ ಮನವಿ ಸಲ್ಲಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago