ತೀರ್ಥಹಳ್ಳಿ : ಪಟ್ಟಣದ ಸಮೀಪದ ಭೀಮನಕಟ್ಟೆಯಲ್ಲಿ ತುಂಗಾನದಿ ತೀರದ ಆಲಗೇರಿ ಎಂಬಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಯ ಶುದ್ದೀಕರಣ ಘಟಕದ ಕಾಮಗಾರಿ ನಡೆಯುತ್ತಿದೆ. ಶಾಸಕ ಆರಗ ಜ್ಞಾನೇಂದ್ರ ಇವರ ಉಸ್ತುವಾರಿಯಲ್ಲಿ ನ್ಯಾಷನಲ್ ಕನ್ಸ್ಟ್ರಕ್ಷನ್ ಸಂಸ್ಥೆ ಈ ಕಾಮಗಾರಿಯನ್ನು ನಿರ್ವಹಿಸುತ್ತಿದೆ.
ಈ ಕಾಮಗಾರಿಯನ್ನು ಇಲ್ಲಿನ ಸ್ಥಳೀಯ ಕೆಲವು ಸಂಘಟನೆಗಳು ವಿರೋಧಿಸುತ್ತಿವೆ. ಈ ಸಂಬಂಧ ಫೆಬ್ರವರಿ 26ರಂದು ಹೆಗ್ಗೋಡು ಶಾಲಾ ಮುಂಭಾಗ ಪ್ರತಿಭಟನೆಗಳು ನಡೆದಿವೆ. ಈ ಸಂದರ್ಭ ಮಧ್ಯಾಹ್ನ 12:30 ರ ಸುಮಾರಿಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸ್ಥಳೀಯರಾದ ಶಾಂತಾ ಕೋಂ ಗಿರೀಶ ಎನ್ನುವವರು ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ರವರಿಗೆ ಹೀನಾಯವಾಗಿ ಬೈದು ಚಪ್ಪಲಿಯಲ್ಲಿ ಹೊಡೆಯುವುದಾಗಿ ಬೆದರಿಕೆ ಹಾಕಿದ್ದಾರೆ.
“ಕಿಮ್ಮನೆ ಎಲ್ಲಿ ಸತ್ತಿದ್ದಾನೆ, ಅವನು ಓಟು ಕೇಳಲು ಬರಲಿ, ಅವನಿಗೆ ಚಪ್ಪಲಿಯಿಂದ ಹೊಡೆಯಿರಿ” ಅಂತ ಅವಹೇಳನಾಕಾರಿಯಾಗಿ ನಿಂದಿಸಿ ಜನರನ್ನು ಎತ್ತಿಕಟ್ಟಿ ಶಾಂತಿ ಭಂಗಕ್ಕೆ ಪ್ರಯತ್ನಿಸಿದ್ದಾರೆ.
ಘಟನೆಗೆ ಸಂಬಂಧ ಕಿಮ್ಮನೆ ರತ್ನಾಕರ್ಗೆ ಅವಹೇಳನ ಮಾಡಿ ನಿಂದಿಸಿರುವ ವೀಡಿಯೋ ಕ್ಲಿಪ್ಗಳನ್ನು ಈ ದೂರು ಅರ್ಜಿಯ ಜೊತೆ ಲಗತ್ತಿಸಿ ಮಹಿಳೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಆಗುಂಬೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…