ಕುಂದಾದ್ರಿ ವಾರ್ಷಿಕ ಜಾತ್ರಾ ಮಹೋತ್ಸವ | ಮಕರ ಸಂಕ್ರಾಂತಿ ಆಚರಣೆ ಜೀವನದಲ್ಲಿ ಸರ್ವರಿಗೂ ಸುಕೃತ ಫಲ ನೀಡಿ ರಾಷ್ಟ್ರವನ್ನು ಸಮೃದ್ಧಗೊಳಿಸಲಿ ; ಹೊಂಬುಜ ಶ್ರೀಗಳು

ತೀರ್ಥಹಳ್ಳಿ : ನಮ್ಮ ಪ್ರಾಚೀನ ಧಾರ್ಮಿಕ ಆಚರಣೆಗಳು ಜೀವನದಲ್ಲಿ ಉತ್ಕೃಷ್ಠ ಮೌಲ್ಯಗಳನ್ನು ರೂಢಿಸುವಂತೆ ಪ್ರೇರಣೆ ನೀಡುತ್ತವೆ. ನಿಸರ್ಗದ ಪ್ರಶಾಂತ ಪರಿಸರದಲ್ಲಿ ಆರಾಧನಾ ಪುಣ್ಯಕ್ಷೇತ್ರಗಳನ್ನು ನಿರ್ಮಿಸಿ, ಧಾರ್ಮಿಕ ಶ್ರದ್ಧೆಯ ಆಚರಣೆಗಳನ್ನು ನೆರವೇರಿಸಲು ಸಮಾಜ ಬಾಂಧವರನ್ನು ಒಗ್ಗೂಡಿಸುವ ಮೌಲ್ಯಾಧಾರಿತ ಪ್ರಜ್ಞೆಯನ್ನು ಭಾವೈಕ್ಯತೆಯ ಧರ್ಮಪ್ರಜ್ಞೆಯನ್ನು ಪೂರ್ವಿಕರು ನಮ್ಮ ದೇಶದಲ್ಲಿ ತಿಳಿಸಿದ್ದಾರೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ಹೇಳಿದರು.

ಅವರು ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾಸಂಸ್ಥಾನದ ಶಾಖಾ ಕೇಂದ್ರವಾಗಿರುವ ಶ್ರೀ ಕುಂದಕುಂದಾಚಾರ್ಯರ ತಪೋಭೂಮಿ ಶ್ರೀ ಕುಂದಾದ್ರಿ ಕ್ಷೇತ್ರದಲ್ಲಿ ಜ. 14 ಭಾನುವಾರದಂದು ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ದೀಪೋತ್ಸವ ಸಂದರ್ಭದಲ್ಲಿ ಧಾರ್ಮಿಕ ಪ್ರವಚನ ನೀಡುತ್ತಾ ಮಕರ ಸಂಕ್ರಾಂತಿ ಆಚರಣೆಯಿಂದ ಜೀವನದಲ್ಲಿ ಸರ್ವರಿಗೂ ಉತ್ತರೋತ್ತರ ಸುಕೃತಫಲ ನೀಡಿ ರಾಷ್ಟ್ರವನ್ನು ಸಮೃದ್ಧಗೊಳಿಸಲಿ ಎಂದು ಹರಸಿ, ಆಶೀರ್ವಚನ ನೀಡಿದರು.

ಪ್ರತಿಯೋರ್ವರೂ ವಿದ್ಯಾಸಂಪನ್ನರಾಗಿ ತಮ್ಮ ಜೀವನದಲ್ಲಿ ಅಹಿಂಸಾತ್ಮಕ ಮನೋಧರ್ಮದ ದಾರಿಯಲ್ಲಿ ಯಶಸ್ಸನ್ನು ಸಾಧಿಸಲು ಸ್ವಸ್ತಿಶ್ರೀಗಳು ತಿಳಿಸುತ್ತಾ ಏಳ್ಳು ಬೆಲ್ಲದಂತೆ ಜೀವನ ಬಾಂಧವ್ಯ ಸಾಮರಸ್ಯದಿಂದ ಬೆಸೆಯಲೆಂದು ಹರಸಿದರು.


ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಪದ್ಮಾವತಿ ದೇವಿ, ಆಚಾರ್ಯ ಶ್ರೀ ಕುಂದಕುಂದರ ಪಾದಚರಣಗಳಿಗೆ ವಿಶೇಷ ಪೂಜೆ, ಆರಾಧನೆ ಸಮರ್ಪಿಸಿದ ಶ್ರೀಗಳವರು ಕುಂದಾದ್ರಿ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಸಂರಕ್ಷಿಸಲು ಸರಕಾರದ, ಸಮಾಜ ಬಾಂಧವರ, ದಾನಿಗಳ ಸಹಕಾರವನ್ನು ಸ್ಮರಿಸಿದರು. ಕ್ಷೇತ್ರದ ಅಭಿವೃದ್ಧಿಯ ವಿವಿಧ ಯೋಜನೆಗಳನ್ನು ಹಂತಹಂತವಾಗಿ ಅನುಷ್ಠಾನ ಮಾಡುವ ವಿಚಾರವನ್ನು ಸ್ವಸ್ತಿಶ್ರೀಗಳವರು ತಿಳಿಸಿದರು.

ಜಿನಭಜನೆ, ಫಲಪುಷ್ಪಾಲಂಕಾರದಿಂದ ಪೂಜೆ ನೆರವೇರಿದವು. ಅನ್ನಪ್ರಸಾದದ ವ್ಯವಸ್ಥೆ ಸಾಂಗವಾಗಿ ಭಕ್ತರಿಗೆ ಮುದನೀಡಿತು. ಶ್ರೀಮಠದ ಆಡಳಿತಾಧಿಕಾರಿ ಸಿ.ಡಿ. ಅಶೋಕ ಕುಮಾರ್, ತೀರ್ಥಹಳ್ಳಿಯ ಖ್ಯಾತ ಆಯುರ್ವೇದ ವೈದ್ಯರಾದ ಡಾ. ಜೀವಂಧರ್ ಜೈನ, ಶೃಂಗೇರಿಯ ಡಾ. ನಿರಂಜನ್, ಧರಣೇಂದ್ರ ಮಲೆನಾಡು ಜೈನ ಮಿಲನ್ ಸದಸ್ಯರು ಹಾಗೂ ಶಿವಮೊಗ್ಗ, ಜಯಪುರ, ಕೊಪ್ಪ, ಚಿಕ್ಕಮಗಳೂರು, ಸಾಗರ, ಮೂಡಬಿದಿರೆ, ಕಳಸ, ದಕ್ಷಿಣ ಕನ್ನಡ, ಹುಂಚ ಶ್ರಾವಕ-ಶ್ರಾವಿಕೆಯರು ಹಾಗೂ ಕುಂದಾದ್ರಿ ಪರಿಸರದ ಭಕ್ತ ಸಮುದಾಯದವರು ಕುಂದಾದ್ರಿ ಜಾತ್ರೆಯಲ್ಲಿ ಪಾಲ್ಗೊಂಡರು. ರಾತ್ರಿ ಲಕ್ಷದೀಪೋತ್ಸವವು ಪೂರ್ವಪರಂಪರೆಯಂತೆ ಏರ್ಪಡಿಸಲಾಗಿತ್ತು.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

11 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

12 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

12 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

15 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

17 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

18 hours ago