ಕುಡಿಯುವ ನೀರಿನ ಬಾವಿಗೆ ವಿಷ ಹಾಕಿ ವಿಕೃತಿ ಮೆರೆದ ದುರುಳರು ! ದೂರು ದಾಖಲು

ರಿಪ್ಪನ್‌ಪೇಟೆ: ಕೋಡೂರು ಗ್ರಾ.ಪಂ. ವ್ಯಾಪ್ತಿಯ ಕೆ.ಕುನ್ನೂರು ಗ್ರಾಮದ ನಾಗಪ್ಪ ಎಂಬುವರ ಮನೆಯ ಕುಡಿಯುವ ನೀರಿನ ತೆರೆದ ಬಾವಿಗೆ ದುರುಳರು ಕಳೆನಾಶಕ ಹಾಕಿದ ಪ್ರಸಂಗವೊಂದು ನಡೆದಿದ್ದು ಈ ಸಂಬಂಧ ರಿಪ್ಪನ್‌ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಏನಿದು ಘಟನೆ ?
ಯುಗಾದಿ ಹಬ್ಬದ ಹಿಂದಿನ ದಿನದಂದು ಬಾವಿಯಲ್ಲಿನ ಕೆಸರು ತೆಗೆಯಲಾಗಿ ಮಾರನೇ ದಿನ (ಏ.09) ಮನೆಯವರು ಬಾವಿಯಲ್ಲಿನ ನೀರನ್ನು ಮೋಟಾರ್ ಸಹಾಯದಿಂದ ಮೇಲಕ್ಕೆತ್ತಿ ಎರಡು ಲೋಟ ನೀರು ಕುಡಿಯುತ್ತಿದ್ದಂತೆ ಏನೋ ವಾಸನೆ ಮೂಗಿಗೆ ಬಡಿದಿದ್ದು ಬಾವಿ ಬಳಿ ತೆರಳಿ ನೋಡಿದಾಗ ಕಳೆನಾಶಕದ ಬಾಟಲ್ ಒಳಗಿನ ಲೇಬಲ್ ಒಂದು ಬಾವಿ ಬಳಿ ದೊರಕಿದ್ದು ತಕ್ಷಣ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಂಡಿದ್ದು ನೀರಿಗೆ ವಿಷ ಬೆರೆತಿರುವುದು ವರದಿಯಿಂದ ದೃಢವಾಗಿದೆ.

ಸಾಯುವ ಸ್ಥಿತಿಯಲ್ಲಿವವರಿಗೆ ಒಂದು ಗುಟುಕು ನೀರು ಬಾಯಿಗೆ ಬಿಟ್ಟರೆ ಬದುಕುತ್ತಿದ್ದರು ಎನ್ನುವಂತಹ ದಿನಗಳಲ್ಲಿ ಮಲೆನಾಡಿನಲ್ಲಿ ಕಳೆದ 8-9 ತಿಂಗಳಿಂದ ಮಳೆಯಿಲ್ಲದೆ ಅಂತರ್ಜಲ ಸಹ ಕುಸಿದಿದ್ದು ಕುಡಿಯುವ ನೀರಿಗೆ ತತ್ವಾರ ಉಂಟಾಗಿದ್ದು ಇಂತಹ ದಿನಗಳಲ್ಲಿ ಇಂತಹ ಹೀನಕೃತ್ಯ ಎಸಗಿದರ‍್ಯಾರು? ಯಾವ ಪುಣ್ಯಾತ್ಮ ಗುಟುಕು ನೀರಿಗಾಗಿ ಪರದಾಡುವಂತಹ ಕಾಲದಲ್ಲಿ ಇಂತಹ ಕೃತ್ಯ ಎಸಗಿದವರು? ಎಂದು ಸಾರ್ವಜನಿಕರಲ್ಲಿ ಚರ್ಚೆ ಶುರುವಾಗಿದೆ‌.

ಕೆಲವು ಕಿಡಿಗೇಡಿಗಳಿಂದಾಗಿ ಊರಿನಲ್ಲಿ ಯಾರು ವಾಸ ಮಾಡದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಬೇಸಿಗೆ ಬಿಸಿಲ ಝಳಕ್ಕೆ ತತ್ತರಿಸಿರುವ ಮಲೆನಾಡಿನ ವ್ಯಾಪ್ತಿಯ ಹಲವು ಹಳ್ಳ-ಕೊಳ್ಳಗಳು ಸಂಪೂರ್ಣ ಬತ್ತಿ ಹೋಗಿ ಅಂತರ್ಜಲ ಸಹ ಕುಸಿಯುತ್ತಿರುವ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜನ ಜಾನುವಾರುಗಳು, ಪ್ರಾಣಿ-ಪಕ್ಷಿಗಳು ಕುಡಿಯುವ ನೀರಿಗಾಗಿ ಪರಿತಪ್ಪಿಸುವಂತಹ ಕಾಲದಲ್ಲಿ ಇಂತಹ ಹೀನ ಕೃತ್ಯದಲ್ಲಿ ತೊಡಗಿರುವ ವ್ಯಕ್ತಿಗಳನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗುವರೇ ಕಾದು ನೋಡಬೇಕಾಗಿದೆ.

ಒಟ್ಟಾರೆಯಾಗಿ ಹನಿ ನೀರಿಗೂ ಪರದಾಡುವಂತಹ ಇಂದಿನ ದಿನಗಳಲ್ಲಿ ಬಾವಿಗೆ ವಿಷ ಹಾಕಿ ನೀರು ಬಳಸದಂತೆ ಮಾಡಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago