ಶಿವಮೊಗ್ಗ : ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ, ವಾಗ್ಮಿ, ಬರಹಗಾರ್ತಿ ಡಾ. ಶುಭಾ ಮರವಂತೆ ಇವರನ್ನು ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ನೂತನ ಸಂಯೋಜನಾಧಿಕಾರಿಯಾಗಿ ನೇಮಕ ಮಾಡಿ ಕುಲಸಚಿವರಾದ ಡಾ. ಸ್ನೇಹಲ್ ಸುಧಾಕರ್ ಲೋಖಂಡೆ ಆದೇಶಿಸಿದ್ದಾರೆ.
ಶಿವಮೊಗ್ಗ-ಚಿಕ್ಕಮಗಳೂರಿನ ಸುಮಾರು ಹನ್ನೆರಡು ಸಾವಿರ ಸ್ವಯಂಸೇವಕರನ್ನು ಹೊಂದಿರುವ ಕುವೆಂಪು ವಿವಿ ಎನ್ಎಸ್ಎಸ್ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಅನೇಕ ಸಾಧನೆ ಮಾಡಿದೆ. ಇತ್ತೀಚಿಗೆ ಅತ್ತ್ಯುತ್ತಮ ಕಾರ್ಯಕ್ರಮಾಧಿಕಾರಿ ರಾಜ್ಯ ಪ್ರಶಸ್ತಿಗೆ ಭಾಜನರಾದ ಡಾ. ಶುಭಾ ಅವರು ಕುವೆಂಪು ವಿಶ್ವ ವಿದ್ಯಾಲಯದ ಮೊಟ್ಟಮೊದಲ ಮಹಿಳಾ ಎನ್ ಎಸ್ ಎಸ್ ಸಂಯೋಜನಾಧಿಕಾರಿಯಾಗಿದ್ದಾರೆ.
ಕುಲಪತಿಗಳಾದ ಡಾ. ಎಸ್. ವೆಂಕಟೇಶ್, ಕುಲಸಚಿವರಾದ ಡಾ. ಸ್ನೇಹಲ್ ಸುಧಾಕರ್ ಲೋಖಂಡೆ, ಮೌಲ್ಯಮಾಪನ ಕುಲಸಚಿವರಾದ ಪ್ರೊ. ಗೋಪಿನಾಥ್, ಪ್ರಾಚಾರ್ಯರಾದ ಡಾ ವೀಣಾ ಎಂ. ಕೆ, ಡಾ. ಸೈಯದ್ ಸನಾವುಲ್ಲಾ, ಡಾ. ರಾಜೇಶ್ವರಿ ಎನ್.ಹಾಗೂ ಎಲ್ಲಾ ಕಾಲೇಜಿನ ಪ್ರಾಚಾರ್ಯರು, ಕಾರ್ಯಕ್ರಮಾಧಿಕಾರಿಗಳು, ವಿದ್ಯಾರ್ಥಿಗಳು, ಆತ್ಮೀಯರು ಡಾ. ಶುಭಾ ಮರವಂತೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…