ಕೂಸಿನಮನೆ ಯೋಜನೆ ಸದ್ಬಳಕೆಗೆ ಶ್ರೀನಿವಾಸ ರೆಡ್ಡಿ ಕರೆ

ಹೊಸನಗರ : ಗ್ರಾಮೀಣ ಭಾಗದ ಕೂಲಿಕಾರರು ಕೆಲಸ ನಿರ್ವಹಿಸುವ ವೇಳೆ ಅವರ ಮಕ್ಕಳ ಸುರಕ್ಷತೆ ಮತ್ತು ಪೋಷಣೆ ಅಗತ್ಯವಾಗಿದೆ. ಮಕ್ಕಳ ದೈಹಿಕ ಬೆಳವಣಿಗೆ ಮತ್ತು ಮಾನಸಿಕ ವಿಕಾಸದ ಹಿತ ಕಾಪಾಡಲು ‘ಕೂಸಿನಮನೆ’ (ಶಿಶುಪಾಲನಾ ಕೇಂದ್ರ) ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ ಎಂದು ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ತಿಳಿಸಿದರು.

ಇಲ್ಲಿನ ಸಾಲಗೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ‘ಕೂಸಿನಮನೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಮತ್ತು ನರೇಗಾ ಯೋಜನೆಯಡಿಯಲ್ಲಿ ಮಹಿಳೆಯರು ಕೂಲಿ ಕೆಲಸ ನಿರ್ವಹಿಸಲು ಪೂರಕ ವಾತಾವರಣ ಹಾಗೂ ವಿವಿಧ ಪೂರಕ ಸೌಕರ್ಯ ಕಲ್ಪಿಸುವುದರ ಜೊತೆಯಲ್ಲಿ ಅವರ ಮಕ್ಕಳ ಆರೋಗ್ಯ, ಪೌಷ್ಠಿಕತೆ ಮತ್ತು ಸುರಕ್ಷತೆಯು ಈ ಯೋಜನೆಯ ಸದುದ್ದೇಶವಾಗಿದೆ ಎಂದರು.

ಈ ಯೋಜನೆ ಅಡಿಯಲ್ಲಿ ಮಕ್ಕಳ ಪೋಷಣೆ ಮಾಡುವ ಆರೈಕೆದಾರರಿಗೆ ನರೇಗಾ ಯೋಜನೆಯ ದಿನಗೂಲಿ 316 ರೂ. ಕೂಲಿಯನ್ನು ಗರಿಷ್ಠ 100 ದಿನಗಳವರೆಗೆ ನೀಡಲಾಗುವುದು. ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ 6 ತಿಂಗಳಿಂದ ಮೂರು ವರ್ಷದ ಶಿಶುಗಳಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಹೇಳಿ, ನರೇಗಾ ಮಹಿಳಾ ಕೂಲಿ ಕಾರ್ಮಿಕರು ಈ ಯೋಜನೆಯ ಸದ್ಬಳಿಕೆಗೆ ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಲಕ್ಷ್ಮಿದೇವಮ್ಮ, ವಸವೆ ಧರ್ಮಪ್ಪ, ಚಂದ್ರಕಲಾ ಶ್ರೀನಿವಾಸ್, ಕಾರ್ಯದರ್ಶಿ ಪವನ್, ಪ್ರಯುಖರಾದ ಚನ್ನಬಸವ, ಜಯನಗರ ಗುರು, ಅಂಗನವಾಡಿ ಸಹಾಯಕಿರು ಸೇರಿದಂತೆ ಹಲವು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

8 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

8 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

10 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

11 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

18 hours ago