ಹೊಸನಗರ: ತಾಲೂಕಿನ ಸೊನಲೆ ಗ್ರಾಮಕ್ಕೆ ಸರ್ಕಾರಿ ಬಸ್ ಮಾರ್ಗವನ್ನು ವಿಸ್ತರಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಬಿ.ಸ್ವಾಮಿರಾವ್ ಬುಧವಾರ ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಸೊನಲೆ ಗ್ರಾಮವು ರಾಜ್ಯದ ಅಭಿವೃದ್ದಿ ಹೊಂದಿರುವ ಆಯ್ದ ಮಾದರಿ ಗ್ರಾಮಗಳಲ್ಲಿ ಒಂದಾಗಿದ್ದು ಶೈಕ್ಷಣಿಕವಾಗಿ ರಾಜ್ಯ ಮಟ್ಟದಲ್ಲಿ ಖ್ಯಾತಿ ಹೊಂದಿದೆ.
ಈ ಗ್ರಾಮದಲ್ಲಿ ಪಂಚಾಯತಿ ಕಟ್ಟಡ, ಸುಸಜ್ಜಿತ ಸರ್ಕಾರಿ ಆಸ್ಪತ್ರೆ, ಬ್ಯಾಂಕ್ ಸೌಲಭ್ಯ, ಸಹಕಾರ ಸಂಘ ಸೇರಿದಂತೆ ಧಾರ್ಮಿಕ ಪುಣ್ಯ ಕ್ಷೇತ್ರ ಶ್ರೀ ರಾಮೇಶ್ವರ ದೇವಾಲಯವಿದ್ದು, ಇಲ್ಲಿನ ಅನೇಕ ನಿವಾಸಿಗಳು ಉದ್ಯೋಗಕ್ಕಾಗಿ, ಹೈಕೋರ್ಟ್, ಸರ್ಕಾರಿ ಕಾರ್ಯಗಳ ನಿಮಿತ್ತ ದೂರದ ಬೆಂಗಳೂರಿಗೆ ಪ್ರತಿನಿತ್ಯ ಖಾಸಗಿ ಬಸ್ ಮೂಲಕವೇ ಸಂಚರಿಸುವಂತಾಗಿದೆ.
ನಿತ್ಯ ಬೆಂಗಳೂರಿನಿಂದ ಸೊನಲೆ ಸಮೀಪದ ಹುಂಚ ಗ್ರಾಮಕ್ಕೆ ಪ್ರತಿ ನಿತ್ಯ ಬಂದು ಅಲ್ಲೆ ನಿಲುಗಡೆ ಆಗುವ ಕೆಎಸ್ಆರ್ಟಿಸಿ ಸ್ಲೀಪರ್ ಬಸ್ನ್ನು 9 ಕಿ.ಮೀ. ಹೆಚ್ಚುವರಿ ಓಡಿಸಿ ಸೊನಲೆ ಗ್ರಾಮದವರೆಗೂ ಮಾರ್ಗ ವಿಸ್ತರಣೆ ಮಾಡಿ ಬಸ್ ನಿಲುಗಡೆ ಮಾಡುವಂತೆ ತಮ್ಮ ಮನವಿ ಪತ್ರದಲ್ಲಿ ಅವರು ಕೋರಿದ್ದು, ಶೀಘ್ರವಾಗಿ ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆಯನ್ನು ಸಾರಿಗೆ ಸಚಿವರು ನೀಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…