ಶಿವಮೊಗ್ಗ: ಕೆಟ್ಟು ನಿಂತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ನಿಂದಾಗಿ ತೊಂದರೆಗೊಳಗಾಗಿದ್ದ ಪ್ರಯಾಣಿಕರಿಗೆ ಸಂಸದ ಬಿ.ವೈ.ರಾಘವೇಂದ್ರ ನೆರವಾಗಿದ್ದು ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಶಿರಸಿ ಉಪ ವಿಭಾಗಕ್ಕೆ ಸೇರಿದ ಸರ್ಕಾರಿ ಬಸ್ ಬೆಂಗಳೂರಿನಿಂದ ಕುಮಟಾಗೆ ತೆರಳುತ್ತಿತ್ತು ಶಿವಮೊಗ್ಗದ ತ್ಯಾವರೆಕೊಪ್ಪ ಸಮೀಪ ಕೆಟ್ಟು ರಸ್ತೆ ಬದಿಯಲ್ಲಿ ನಿಂತಿತ್ತು. ಇದರಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು.
ಇದೇ ವೇಳೆ ಶಿವಮೊಗ್ಗದಿಂದ ಸಾಗರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಸಂಸದ ಬಿ.ವೈ.ರಾಘವೇಂದ್ರ, ಸರ್ಕಾರಿ ಬಸ್ ನಿಂತಿದ್ದನ್ನು ಗಮನಿಸಿ ಕಾರಿನಿಂದ ಇಳಿದು ಬಸ್ ಚಾಲಕ, ನಿರ್ವಾಹಕರ ಬಳಿ ಕಾರಣ ಕೇಳಿದರು. ಬಸ್ ಕೆಟ್ಟಿರುವ ಮಾಹಿತಿ ತಿಳಿದ ಸಂಸದರು, ಕೆ.ಎಸ್.ಆರ್.ಟಿ.ಸಿ ಶಿವಮೊಗ್ಗ ವಿಭಾಗದ ವಿಭಾಗೀಯ ನಿಯಂತ್ರಣ ಅಧಿಕಾರಿ ವಿಜಯ್ ಕುಮಾರ್ ಅವರನ್ನು ಸಂಪರ್ಕಿಸಿ ಕೂಡಲೇ ಬಸ್ ದುರಸ್ತಿಗೆ ಕ್ರಮಕೈಗೊಂಡು ಪ್ರಯಾಣಿಕರಿಗೆ ನೆರವಾಗುವಂತೆ ಸೂಚಿಸಿದರು.
ಅದರಂತೆ ಕೆ.ಎಸ್.ಆರ್.ಟಿ.ಸಿ ಡಿಸಿ ವಿಜಯ್ ಕುಮಾರ್ ಸಿಬ್ಬಂದಿಗಳನ್ನು ಸ್ಥಳಕ್ಕೆ ಕಳುಹಿಸಿ ಬಸ್ ದುರಸ್ತಿಗೊಳಿಸುವಲ್ಲಿ ಸಹಕರಿಸಿದರು. ತದನಂತರ ಬಸ್ ಕುಮಟಾದತ್ತ ಪ್ರಯಾಣ ಬೆಳೆಸಿತು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…