ಹೊಸನಗರ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿಯ ಅಂತಿಮ ವರ್ಷದ ಬಿ. ಎಸ್ಸಿ ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರವನ್ನು ಆರಂಭಿಸಲಾಗಿದ್ದು, ಗುರುವಾರದಂದು ನವಗ್ರಹ ತಂಡದವರು ಮಾರುತಿಪುರದ ಕೃಷಿ ಮಾಹಿತಿ ಕೇಂದ್ರದ ಮುಂದೆ ಕೈದೋಟ ಸಿದ್ಧಪಡಿಸುವ ವಿಧಾನ ಪ್ರದರ್ಶನವನ್ನು ಏರ್ಪಡಿಸಿದ್ದರು.
ಈ ಕೈದೋಟವನ್ನು ವಿದ್ಯಾರ್ಥಿಗಳೇ ಬಹಳ ಶ್ರಮಪಟ್ಟು ಸಿದ್ಧಪಡಿಸಿದ್ದು, ಅವರ ಕೆಲಸದ ಶೈಲಿಯನ್ನು ನೋಡಿ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮವನ್ನು ಇರುವಕ್ಕಿ ಕೃಷಿ ಮಹಾವಿದ್ಯಾಲಯದ ಪ್ರಾಧ್ಯಾಪಕಿಯಾದ ಡಾ.ದಿವ್ಯಾ ಬೀಜ ಬಿತ್ತನೆ ಮಾಡುವ ಮೂಲಕ ಆರಂಭ ಮಾಡಿದರು.
ಈ ಕಾರ್ಯಕ್ರಮಕ್ಕೆ ಸರ್ಕಾರಿ ಶಾಲೆಯ ಶಿಕ್ಷಕರಾದ ಚಂದ್ರಶೇಕರ್ ಹಾಗೂ ವಿದ್ಯಾ ಅವರು ಬಿತ್ತನೆ ಮಾಡಿ ಶುಭಕೋರಿದರು.
ನೆರೆದಿದ್ದ ಜನರಲ್ಲಿ ಕೈದೋಟದ ಮಹತ್ವವನ್ನು ತಿಳಿಸಿ ಅದರಿಂದ ಮನೆಗೆ ಬೇಕಾಗುವ ತರಕಾರಿಯನ್ನು ತಾವೇ ಸಾವಯವ ರೀತಿಯಲ್ಲೇ ಹೇಗೆ ಬೆಳೆಯಬಹುದು ಎಂದು ಹಾಗೂ ಇದರಿಂದ ಆರ್ಥಿಕತೆಗೆ ಹೀಗೆ ಸಹಾಯವಾಗುತ್ತದೆ ಎಂದು ತಿಳಿಸಿಕೊಡಲಾಯಿತು.
ಕೊತ್ತಂಬರಿ, ಪಾಲಕ್, ಮೂಲಂಗಿ, ಕ್ಯಾರೆಟ್, ಮೆಂತ್ಯಾ ಮುಂತಾದ ತರಕಾರಿಯನ್ನು ಬಿತ್ತನೆ ಮಾಡಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…