ಶಿವಮೊಗ್ಗ: ಕೊಲೆ ಪ್ರಕರಣವೊಂದರಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮದ ನಿವಾಸಿಗಳಾದ ಕುಮಾರನಾಯ್ಕ್ (36), ಪೀರ್ಯಾನಾಯ್ಕ್ (38), ಚಿನ್ನಾ ನಾಯ್ಕ್ (32) ಹಾಗೂ ಮುಸ್ಸೇಹಾಳ್ ಗ್ರಾಮದ ನಿವಾಸಿಯಾದ ಮಧುಕುಮಾರ (19) ಶಿಕ್ಷೆಗೊಳಗಾದವರೆಂದು ಗುರುತಿಸಲಾಗಿದೆ.
ನಾಲ್ವರಿಗೂ ಜೀವಾವಧಿ ಶಿಕ್ಷೆಯ ಜೊತೆಗೆ 23,500 ರೂ. ದಂಡ ವಿಧಿಸ ಲಾಗಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 3 ವರ್ಷಗಳ ಸಾದಾ ಕಾರಗೃಹ ಶಿಕ್ಷೆ ಅನುಭವಿಸುವಂತೆ, ನ್ಯಾಯಾಧೀಶರು ತೀರ್ಪಿನಲ್ಲಿ ಆದೇಶಿಸಿದ್ದಾರೆ.
ನ್ಯಾಯಾಧೀಶರಾದ ಬಿ.ಆರ್.ಪಲ್ಲವಿ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಪುಷ್ಪರವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ: ಹೊಳೆಬೆನವಳ್ಳಿ ಗ್ರಾಮದ ನಿವಾಸಿ ಮಹೇಶ್ ನಾಯ್ಕ್ (40) ಎಂಬುವರೊಂದಿಗೆ, ಗ್ರಾಮ ಪಂಚಾಯ್ತಿ ಚುನಾವಣೆಗೆ ಸ್ಪರ್ಧಿಸುವ ವಿಚಾರದಲ್ಲಿ ಪ್ರಸ್ತುತ ಶಿಕ್ಷೆಗೊಳಗಾದವರು ಗಲಾಟೆ ಮಾಡಿ ಕೊಂಡಿದ್ದರು.
ಇದೇ ವೈಮನಸ್ಸಿನ ಕಾರಣವಾಗಿ 05.05.2017 ರಂದು ಮಧ್ಯಾಹ್ನ ಬೈಕ್ ನಲ್ಲಿ ಹೊಳೆಬೆನವಳ್ಳಿ ಸಣ್ಣ ತಾಂಡಾದ ಚಾನಲ್ ಬಳಿ ತೆರಳುತ್ತಿದ್ದ ಮಹೇಶ್ ನಾಯ್ಕ್ ಅವರ ಮೇಲೆ, ಹರಿತವಾದ ಆಯುಧದಿಂದ ದಾಳಿ ಮಾಡಿ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.
ಈ ಸಂಬಂಧ ಮೃತನ ಪತ್ನಿಯು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐಪಿಸಿ ಕಲಂ 143, 302, 149 ರ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇನ್ಸ್ಪೆಕ್ಟರ್ ಆರ್.ವಿ.ಗಂಗಾಧರಪ್ಪ ಅವರು ಪ್ರಕರಣ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…
ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…
ರಿಪ್ಪನ್ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…
ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…
ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.