ಗಣಪತಿ ಮೆರವಣಿಗೆ ಯಶಸ್ಸಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಅಭಿನಂದನೆ

ಶಿವಮೊಗ್ಗ: ನಗರದ ಹಿಂದೂ ಮಹಾ ಮಂಡಳಿ ವತಿಯಿಂದ ನಡೆದ 79ನೇ ವರ್ಷದ ಗಣೋಶೋತ್ಸವ ಮೆರವಣಿಗೆಯು ಅತ್ಯಂತ ವಿಜೃಂಭಣೆಯಿಂದ ಯಾವುದೇ ಅಹಿತಕರ ಘಟನೆ ಇಲ್ಲದೆ ಸಾರ್ವಜನಿಕರ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಕಾರದಿಂದ ನೆರವೇರಿದ್ದು ಯಶಸ್ಸಿಗೆ ಕಾರಣಕರ್ತರಾದ ಎಲ್ಲರಿಗೂ ಅಭಿನಂದನೆಗಳು ಎಂದು ಶಾಸಕ ಎಸ್. ಎನ್. ಚನ್ನಬಸಪ್ಪ ಹೇಳಿದ್ದಾರೆ.


ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವರ್ಷದಿಂದ ವರ್ಷಕ್ಕೆ ಗಣಪತಿಯ ಮೆರವಣಿಗೆಯಲ್ಲಿ ಲಕ್ಷಾಂತರ ಜನ ಪಾಲ್ಗೊಳ್ಳುತ್ತಿದ್ದಾರೆ. ನಗರದ ಎಲ್ಲಾ ಜನರು ಪಕ್ಷ ಭೇದ ಮರೆತು ಒಗ್ಗಟ್ಟಿನಿಂದ ಈ ಮೆರವಣಿಗೆಗೆ ಶಕ್ತಿ ತುಂಬಿದ್ದಾರೆ. ಕೇಸರಿ ಅಲಂಕಾರ ಸಮಿತಿ, ಶಿವಪ್ಪ ನಾಯಕ ಹೂವಿನ ಮಾರುಕಟ್ಟೆ ಸಂಘ ಸೇರಿದಂತೆ ಅನೇಕ ಸಂಘಟನೆಗಳು ನಗರದ ಅಲಂಕಾರಕ್ಕೆ ಮತ್ತು ದಾಸೋಹಕ್ಕೆ ಸ್ವಯಂಪ್ರೇರಿತವಾಗಿ ನೆರವು ನೀಡಿವೆ. ಸಾವಿರಾರು ಕಲಾತ್ಮಕ ಹಾರಗಳನ್ನು ನಾಗರಿಕರು ಗಣಪತಿಗೆ ಸಮರ್ಪಿಸಿದ್ದಾರೆ. ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಶ್ರೀಗಳು ಮೆರವಣಿಗೆಗೆ ಚಾಲನೆ ನೀಡಿ ಆಶೀರ್ವಾದ ಮಾಡಿದರು. ಭಕ್ತಾದಿಗಳಿಗೆ ರಸ್ತೆಯ ಇಕ್ಕೆಲಗಳಲ್ಲಿ ಪ್ರಸಾದ, ನೀರು, ಮಜ್ಜಿಗೆ ಮತ್ತು ಸಿಹಿ ವಿತರಿಸಿ ಶಿವಮೊಗ್ಗದ ಸಂಸ್ಕೃತಿಯ ಹೆಗ್ಗಳಿಕೆಯನ್ನು ಬಿಂಬಿಸಿದ್ದಾರೆ. ಗೋಪಿ ವೃತ್ತದಲ್ಲಿ ಶಿವಮೊಗ್ಗ ಗಣೇಶೋತ್ಸವ ಸಮಿತಿ ವತಿಯಿಂದ ವಿಶೇಷ ಕಾರ್ಯಕ್ರ ಮೆರವಣಿಗೆಗೆ ಮೆರುಗು ನೀಡಿತ್ತು.

ಕುಟುಂಬ ಸಮೇತರಾಗಿ ತಂಡೋಪತಂಡವಾಗಿ ಜಿಲ್ಲೆಯ ಎಲ್ಲಾ ಭಾಗಗಳಿಂದಲೂ ಈ ಬಾರಿಯ ಮೆರವಣಿಗೆಯಲ್ಲಿ ಜನರು ಭಾಗಿಯಾಗಿದ್ದರು. ನಾಗರಿಕರ ಅಪೇಕ್ಷೆಗೆ ತಕ್ಕಂತೆ ರಾಜಬೀದಿ ಉತ್ಸವ ನಡೆದಿದೆ. ಅ.1ರಂದು ನಡೆಯುವ ಈದ್‌ಮಿಲಾದ್ ಕೂಡ ಯಶಸ್ವಿಯಾಗಲಿ. ಶಿವಮೊಗ್ಗದ ಕಲಾವಿದರೇ ನರಸಿಂಹ ಅಲಂಕಾರವನ್ನು ನಿರ್ಮಿಸಿ ಜನಾಕರ್ಷಣೆಗೆ ಕಾರಣವಾಗಿದ್ದಲ್ಲದೆ ಮಾಧ್ಯಮಗಳ ಪ್ರಚಾರ ಕೂಡ ಯಶಸ್ವಿಗೆ ಕಾರಣವಾಯಿತು. ಎಲ್ಲಾ ರಾಜಕೀಯ ಪಕ್ಷದವರು ಕೂಡ ಪ್ರಸಾದ ವ್ಯವಸ್ಥೆ ಕಲ್ಪಿಸಿ ಒಗ್ಗಟ್ಟಿನಿಂದ ಈ ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆ ಯಶಸ್ಸಿಗೆ ಕಾರಣರಾದರು. ಸಮಸ್ತ ನಾಗರಿಕರಿಗೆ ಎಲ್ಲಾ ರಾಜಕೀಯ ಪಕ್ಷದ ಮುಖಂಡರಿಗೆ, ಕಲಾವಿದರಿಗೆ, ದಾನಿಗಳಿಗೆ ಮತ್ತು ಮಾಧ್ಯಮದವರಿಗೆ, ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪ್ರಮುಖರಾದ ಜ್ಞಾನೇಶ್ವರ್, ಪ್ರಭಾಕರ್, ಜಗದೀಶ್, ಮೋಹನ್ ರೆಡ್ಡಿ, ಅಣ್ಣಪ್ಪ, ಬಾಲು ಮೊದಲಾದವರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago