Categories: Shivamogga

ಗಣಪತಿ ವಿಸರ್ಜನೆ ಶಾಂತಿ ಮತ್ತು ಸುವ್ಯವಸ್ಥೆ ಹಾಗೂ ಸೌಹಾರ್ದಯುತವಾಗಿ ಮುಕ್ತಾಯಗೊಂಡಿರುವುದು ಶ್ಲಾಘನೀಯ ; ಮಧು ಬಂಗಾರಪ್ಪ

ಶಿವಮೊಗ್ಗ: ಶಿವಮೊಗ್ಗದ ಪ್ರತಿಷ್ಠಿತ ಹಿಂದೂ ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಮಹಾಗಣಪತಿ ವಿಸರ್ಜನಾ ಕಾರ್ಯಕ್ರಮ ಗುರುವಾರ ಶಾಂತಿ ಮತ್ತು ಸುವ್ಯವಸ್ಥೆ ಹಾಗೂ ಸೌಹಾರ್ದಯುತವಾಗಿ ಮುಕ್ತಾಯಗೊಂಡಿರುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.


ಸೆ.18ರಿಂದ ಪ್ರಾರಂಭಗೊಂಡು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗಣಪತಿಯ ಪೂಜಾನುಷ್ಠಾನ ನಡೆದಿದ್ದು, ನಿನ್ನೆ ಗಣಪತಿಯ ವಿಸರ್ಜನಾ ಕಾರ್ಯ ಸೌಹಾರ್ದಯುತವಾಗಿ ನಡೆದಿದ್ದು, ಅದಕ್ಕೆ ಕಾರಣರಾದ ಕಾರ್ಯಕ್ರಮದ ಆಯೋಜಕರು, ಜನಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಭಕ್ತವೃಂದ ಹಾಗೂ ಜಿಲ್ಲಾಡಳಿತಕ್ಕೆ ತಮ್ಮ ಅಭಿನಂದನೆ ತಿಳಿಸಿದ್ದಾರೆ.


ಹಾಗೆಯೇ ಜಿಲ್ಲೆಯ ಎಲ್ಲಾ ಕಾರ್ಯಕ್ರಮಗಳು ಹೀಗೆಯೇ ಶಾಂತಿಯುತವಾಗಿ ನಡೆದು ಎಲ್ಲಾ ವರ್ಗದ ಜನರಲ್ಲಿ ಸೌಹಾರ್ದತೆ ನೆಲೆಸಲಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ದಾರಿದೀಪವಾಗಲಿ ಎಂದು ಅವರು ಆಶಿಸಿದ್ದಾರೆ.

Malnad Times

Recent Posts

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

4 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

4 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

5 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

5 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

7 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

10 hours ago