ಗಣೇಶನ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು !
ಸಾಗರ : ಗಣೇಶನ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ವ್ಯಕ್ತಿಯೋರ್ವ ನೀರು ಪಾಲಾದ ಘಟನೆ ತಾಲೂಕಿನ ಅನಂದಪುರ ಬಳಿಯ ಜೇಡಿಸರದಲ್ಲಿ ನಡೆದಿದೆ.
ಸತೀಶ್ ಗೌಡ (45) ನೀರು ಪಾಲಾದ ವ್ಯಕ್ತಿ. ಗಣಪತಿ ವಿಸರ್ಜನೆಗಾಗಿ ಆಳ ನೋಡಲು ಕೆರೆಗೆ ಇಳಿದಿದ್ದ ಸತೀಶ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಅಡುಗೆ ಕಂಟ್ರಾಕ್ಟರ್ ಕೆಲಸ ಮಾಡುತ್ತಿದ್ದ ಸತೀಶ್ ತಮ್ಮ ಬಾವನ ಮನೆಯಲ್ಲಿ ಇಟ್ಟಿದ್ದ ಗಣಪತಿ ವಿಸರ್ಜನೆಗಾಗಿ ಬಂದಿದ್ದರು ಎಂದು ತಿಳಿದುಬಂದಿದೆ.