ಗಣೇಶೋತ್ಸವದ ಅಂಗವಾಗಿ ಹಿಂಡ್ಲೆಮನೆಯಲ್ಲಿ ನಾಳೆ ಬಳೆ ಕೋಲಾಟ ಆಯೋಜನೆ

ರಿಪ್ಪನ್‌ಪೇಟೆ : ರಾತ್ರಿಯಿಡೀ ನಡೆಯುವ ಮಲೆನಾಡಿನ ಸುಪ್ರಸಿದ್ಧ ವೈವಿಧ್ಯಮಯ ಜಾನಪದ ಕಲೆಗಳಲ್ಲೊಂದಾದ ನೃತ್ಯ ಹಾಗು ಹಾಡುಗಾರಿಕೆ ವಿಶಿಷ್ಟ ಲಯದಿಂದ ಆಕರ್ಷಣೀಯವಾಗಿರುವ ಬಳೆ ಕೋಲಾಟ ಕಾರ್ಯಕ್ರಮವನ್ನು 40ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಹಿಂಡ್ಲೆಮನೆಯಲ್ಲಿ ಆಯೋಜಿಸಲಾಗಿದೆ ಎಂದು ಶ್ರೀ ಸಿದ್ದಿವಿನಾಯಕ ಯುವಕ ಸಂಘ ಹಿಂಡ್ಲೆಮನೆ ಇದರ ಪದಾಧಿಕಾರಿಗಳು ತಿಳಿಸಿದ್ದಾರೆ.

ಸೆ.19ರ ಮಂಗಳವಾರ ರಾತ್ರಿ 9:30 ರಿಂದ ಪ್ರಾರಂಭವಾಗುವ ಈ ಕಾರ್ಯಕ್ರಮಕ್ಕೆ ಸಾಗರ ತಾಲೂಕಿನ ಹೆಗ್ಗೋಡಿನ ಶ್ರೀ ಭೂತೇಶ್ವರ ಕಲಾ ಬಳಗ ಮತ್ತು ಹೊಸನಗರ ತಾಲೂಕಿನ ಕೆದ್ದಲುಗುಡ್ಡೆ ಶ್ರೀ ಶನೇಶ್ವರ ಕಲಾ ಸಂಘ ತಂಡಗಳು ಭಾಗವಹಿಸುತ್ತಿವೆ ಎಂದು ತಿಳಿಸಿದ ಅವರು, ಪ್ರಥಮ ಬಹುಮಾನವಾಗಿ 16 ಸಾವಿರ ರೂ. ಹಾಗೂ ಬೆಳ್ಳಿ ಬಳೆ ಮತ್ತು ದ್ವಿತೀಯ ಬಹುಮಾನವಾಗಿ 15 ಸಾವಿರ ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನೂ ಭಾಗವಹಿಸುವ ಕಲಾ ತಂಡಗಳಿಗೆ ಮತ್ತು ಸಾರ್ವಜನಿಕರಿಗೆ ರಾತ್ರಿ ಊಟದ ವ್ಯವಸ್ಥೆ ಇರಲಿದ್ದು ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕೆಂದು ಈ ಮೂಲಕ ಕೋರಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಹೆಚ್.ಈ. ಟೀಕಪ್ಪ, ಉಪಾಧ್ಯಕ್ಷ ಉದಯ ಕೆ.ಸಿ., ಖಜಾಂಚಿ ಶ್ರೀನಿವಾಸ ಹೆಚ್‌.ಜಿ., ಕಾರ್ಯದರ್ಶಿ ಗುರು ಹೆಚ್‌.ವೈ., ಸಹ ಕಾರ್ಯದರ್ಶಿ ನಾಗರಾಜ ಹೆಚ್‌.ಎಲ್., ಸಂಚಾಲಕರಾದ ಪುರುಷೋತ್ತಮ್ ಹೆಚ್.ಎನ್‌. ಮತ್ತು ಸಮಿತಿಯ ಇನ್ನಿತರ ಪದಾಧಿಕಾರಿಗಳು ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago